Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...