Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...