Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...