Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...