Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...