Homeಮುಖಪುಟ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

- Advertisement -
- Advertisement -

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ, ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಅವರು ಮಾತನಾಡಿದರು. 

ಈ ವೇಳೆ ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶೋಷಿಸುವ ಮನಸ್ಥಿತಿ: 

ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಅವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು. 

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು ಅವರ ಪ್ರಮುಖ ಕರೆಯಾಗಿತ್ತು. 

ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧರ್ಮದ ಹೆಸರಲ್ಲಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವವರೆಲ್ಲಾ ಬಿಲ್ಲವ, ಈಳವ ಮತ್ತು ಈಡಿಗ, ಬೆಸ್ತ ಸಮುದಾಯಗಳ ಮಕ್ಕಳೇ ಆಗಿದ್ದಾರೆ. ಇವರಿಗೆ ನಾರಾಯಣಗುರುಗಳ ಬದುಕಿನ ಪಾಠವನ್ನು ಅರ್ಥ ಮಾಡಿಸಬೇಕಾದ ತುರ್ತು ಇದೆ.

ಆದರೆ, ನಾರಾಯಣ ಗುರುಗಳ ಮಾತುಗಳಿಂದ ಅವರ ಆದರ್ಶಗಳನ್ನು ಅಳಿಸಿ, ಕೇವಲ ಮಾತುಗಳನ್ನು ಅಪಾರ್ಥವಾಗಿ ಬಳಸುವ ಪರಿಪಾಠ ಶುರುವಾಗಿರುವುದು ಬೇಸರದ ಸಂಗತಿಯಾಗಿದೆ.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎಂದು ಗುರುಗಳು ಕರೆ ಕೊಟ್ಟಿದ್ದರ ಅರ್ಥ ಎಲ್ಲರೂ ನಾರಾಯಣಗುರುಗಳ ಹೆಸರಲ್ಲಿ ಒಂದೊಂದು ದೇವಸ್ಥಾನ ಕಟ್ಟಿ ಅನ್ನುವುದಾಗಿರಲಿಲ್ಲ. ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಪ್ರವೇಶ ಪಡೆಯಲು ಒದ್ದಾಡುವುದಕ್ಕಿಂತ ನಿಮ್ಮದೇ ದೇವರ ಗುಡಿಯನ್ನು ಸೃಷ್ಟಿಸಿಕೊಳ್ಳಿ ಎನ್ನುವುದಾಗಿತ್ತು. 

ನಾರಾಯಣ ಗುರುಗಳು ಶಿವನ ಪ್ರತಿಷ್ಠಾಪನೆ ಮಾಡಿದಾಗ ಜಾತಿವಾದಿಗಳಿಂದ ಬಂದ ವಿರೋಧಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದ ಗುರುಗಳು, “ಇದು ನಿಮ್ಮ ಶಿವ ಅಲ್ಲ, ಈಳವರ ಶಿವ” ಎಂದು ಅವರ ಬಾಯಿ ಮುಚ್ಚಿಸಿದ್ದರು.

ಬಳಿಕ‌ ಎಲ್ಲರೂ ದೇವಸ್ಥಾನಗಳನ್ನೇ ಕಟ್ಟಲು ಮುಂದಾದಾಗ ಹೆದರಿದ ಗುರುಗಳು ಕೊನೆಗೆ ದೇವಸ್ಥಾನ ಕಟ್ಟಿ ಶಿವನ ಬದಲಿಗೆ ಕನ್ನಡಿಯನ್ನು ಪ್ರತಿಷ್ಠಾಪಿಸಿ ದೇವರು ನಿಮ್ಮೊಳಗೇ ಇದ್ದಾನೆ, ಹೊರಗೆ ಹುಡುಕುವ ಅಗತ್ಯ ಇಲ್ಲ ಎನ್ನುವ ಸಂದೇಶ ನೀಡಿದ್ದರು ಎಂದು ವಿವರಿಸಿದರು. 

ದೇವಸ್ಥಾನಗಳನ್ನು ಕಟ್ಟಿ ಕೆಳ ಜಾತಿಯ ಅರ್ಚಕರುಗಳನ್ನು ನೇಮಿಸಿದ್ದು ನಾರಾಯಣಗುರುಗಳ ಮತ್ತೊಂದು ಕ್ರಾಂತಿಯಾಗಿತ್ತು. 

ಆದರೆ ಎಷ್ಟು ಮಂದಿ ಹಿಂದುಳಿದವರು ಇಂದು ಕೆಳ ಜಾತಿಯ ಅರ್ಚಕರನ್ನು ಕರೆಸುತ್ತಾರೆ, ನಂಬುತ್ತಾರೆ ಎನ್ನುವುದನ್ನು ಪ್ರಶ್ನಿಸಬೇಕಿದೆ ಎಂದರು. 

ನಾರಾಯಣಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ ಗಳಿಸಿ ಎಂದು ಕರೆ ನೀಡುವುದರ ಹಿಂದೆ ಶಾಲಾ ಶಿಕ್ಷಣದ ಜೊತೆಗೆ ಸಾಮಾಜಿಕ‌ ಶಿಕ್ಷಣವನ್ನೂ ಪಡೆಯುವ ಮೂಲಕ ಶೋಷಕ, ಶೋಷಿತ ಮತ್ತು ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತಿ ಹೊಂದಿ ಎನ್ನುವುದಾಗಿತ್ತು. 

ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳಿಗೆ ಮಾತ್ರ ಮಾನ್ಯತೆ ನೀಡಿದರೆ ಅಪಾರ್ಥದ ಆಚರಣೆಗಳಿಗೆ ದಾರಿ ಮಾಡಿ ಕೊಡುತ್ತದೆ. 

ಅಂಬೇಡ್ಕರ್, ನಾರಾಯಣಗುರುಗಳು ಮೀಸಲಾತಿಯನ್ನು ಜಾತ್ಯತೀತ ಸಮಾಜ ನಿರ್ಮಾಣದ ಭಾಗವಾಗಿ ಬೆಂಬಲಿಸಿದ್ದರು. 

ಆದರೆ ಇಂದು ಮೀಸಲಾತಿ ಚಳವಳಿ ಜಾತೀಯತೆಯ ಭಾಗವಾಗಿ ನಡೆಯುತ್ತಿದೆ. ಎಲ್ಲಾ ಜಾತಿಯವರಿಗೂ ಮೀಸಲಾತಿ, ಒಳ ಮೀಸಲಾತಿ ಬೇಕಾಗಿದೆ. ಹೀಗಾಗಿ ಇಂದು ಮೀಸಲಾತಿಯ ಹೋರಾಟ ಜಾತಿ ಸಮಾಜವನ್ನು ಗಟ್ಟಿಗೊಳಿಸುವ ಭಾಗವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ಒಂದು ಮಾತು ಹೇಳ್ತಾರೆ. “ಶಿಕ್ಷಣ ಪಡೆದವರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿದ್ದಾರೆ ಎನ್ನುವ ಮಾತನ್ನು ಪದೇ ಪದೇ ಹೇಳುತ್ತಾರೆ.

ಈ ಎಲ್ಲಾ ಕಾರಣಗಳಿಂದ ಇಂದು ಜಾತ್ಯಾತೀತತೆಯ ಮಾರ್ಯಾದಾ ಹತ್ಯೆ ನಡೆಯುತ್ತಿದೆ. ಜಾತಿ ಜಾತಿಯವರನ್ನೇ ಸುತ್ತ ತುಂಬಿಕೊಂಡು ಓಡಾಡುವುದೇ ದೊಡ್ಡ ಶಕ್ತಿ ಅನ್ನಿಸಿಕೊಳ್ಳುವ ದುರಂತದ ಸಾಮಾಜಿಕ, ರಾಜಕೀಯ ಸಂದರ್ಭವನ್ನು ನಾವು ನೋಡುತ್ತಿದ್ದೇವೆ ಎಂದರು. 

ಆದ್ದರಿಂದ ಧಾರ್ಮಿಕ ಸಹಿಷ್ಣುತೆ ಮತ್ತು ವಿಶ್ವಬಂಧುತ್ವವನ್ನು ಆಚರಿಸುವ ಮೂಲಕ ನಾರಾಯಣಗುರುಗಳ ಆದರ್ಶಗಳಿಗೆ ನಾವು ಚೈತನ್ಯ ತುಂಬಬೇಕಿದೆ ಎಂದರು.

ಯಾವುದೇ ಧರ್ಮವಿರಲಿ, ಮನುಷ್ಯನನ್ನು ಉತ್ತಮಗೊಳಿಸಿದರೆ ಸಾಕು ಎನ್ನುವುದು ಅವರ ವಿಶಾಲ ದೃಷ್ಟಿಕೋನವಾಗಿತ್ತು. ಎಲ್ಲಾ ರೀತಿಯ ತಾರತಮ್ಯದ ಮನಸ್ಥಿತಿಯಿಂದ ಮುಕ್ತವಾದ ಅಪ್ಪಟ ಮನುಷ್ಯನನ್ನು ರೂಪಿಸುವುದೇ ನಾರಾಯಣಗುರುಗಳ ಬದುಕಿನ‌ ಸಂದೇಶವಾಗಿತ್ತು ಎನ್ನುವುದನ್ನು ನಾವುಗಳು ಮರೆಯಬಾರದು ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...