Homeಮುಖಪುಟ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

- Advertisement -
- Advertisement -

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ, ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಅವರು ಮಾತನಾಡಿದರು. 

ಈ ವೇಳೆ ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶೋಷಿಸುವ ಮನಸ್ಥಿತಿ: 

ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಅವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು. 

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು ಅವರ ಪ್ರಮುಖ ಕರೆಯಾಗಿತ್ತು. 

ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧರ್ಮದ ಹೆಸರಲ್ಲಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವವರೆಲ್ಲಾ ಬಿಲ್ಲವ, ಈಳವ ಮತ್ತು ಈಡಿಗ, ಬೆಸ್ತ ಸಮುದಾಯಗಳ ಮಕ್ಕಳೇ ಆಗಿದ್ದಾರೆ. ಇವರಿಗೆ ನಾರಾಯಣಗುರುಗಳ ಬದುಕಿನ ಪಾಠವನ್ನು ಅರ್ಥ ಮಾಡಿಸಬೇಕಾದ ತುರ್ತು ಇದೆ.

ಆದರೆ, ನಾರಾಯಣ ಗುರುಗಳ ಮಾತುಗಳಿಂದ ಅವರ ಆದರ್ಶಗಳನ್ನು ಅಳಿಸಿ, ಕೇವಲ ಮಾತುಗಳನ್ನು ಅಪಾರ್ಥವಾಗಿ ಬಳಸುವ ಪರಿಪಾಠ ಶುರುವಾಗಿರುವುದು ಬೇಸರದ ಸಂಗತಿಯಾಗಿದೆ.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎಂದು ಗುರುಗಳು ಕರೆ ಕೊಟ್ಟಿದ್ದರ ಅರ್ಥ ಎಲ್ಲರೂ ನಾರಾಯಣಗುರುಗಳ ಹೆಸರಲ್ಲಿ ಒಂದೊಂದು ದೇವಸ್ಥಾನ ಕಟ್ಟಿ ಅನ್ನುವುದಾಗಿರಲಿಲ್ಲ. ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಪ್ರವೇಶ ಪಡೆಯಲು ಒದ್ದಾಡುವುದಕ್ಕಿಂತ ನಿಮ್ಮದೇ ದೇವರ ಗುಡಿಯನ್ನು ಸೃಷ್ಟಿಸಿಕೊಳ್ಳಿ ಎನ್ನುವುದಾಗಿತ್ತು. 

ನಾರಾಯಣ ಗುರುಗಳು ಶಿವನ ಪ್ರತಿಷ್ಠಾಪನೆ ಮಾಡಿದಾಗ ಜಾತಿವಾದಿಗಳಿಂದ ಬಂದ ವಿರೋಧಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದ ಗುರುಗಳು, “ಇದು ನಿಮ್ಮ ಶಿವ ಅಲ್ಲ, ಈಳವರ ಶಿವ” ಎಂದು ಅವರ ಬಾಯಿ ಮುಚ್ಚಿಸಿದ್ದರು.

ಬಳಿಕ‌ ಎಲ್ಲರೂ ದೇವಸ್ಥಾನಗಳನ್ನೇ ಕಟ್ಟಲು ಮುಂದಾದಾಗ ಹೆದರಿದ ಗುರುಗಳು ಕೊನೆಗೆ ದೇವಸ್ಥಾನ ಕಟ್ಟಿ ಶಿವನ ಬದಲಿಗೆ ಕನ್ನಡಿಯನ್ನು ಪ್ರತಿಷ್ಠಾಪಿಸಿ ದೇವರು ನಿಮ್ಮೊಳಗೇ ಇದ್ದಾನೆ, ಹೊರಗೆ ಹುಡುಕುವ ಅಗತ್ಯ ಇಲ್ಲ ಎನ್ನುವ ಸಂದೇಶ ನೀಡಿದ್ದರು ಎಂದು ವಿವರಿಸಿದರು. 

ದೇವಸ್ಥಾನಗಳನ್ನು ಕಟ್ಟಿ ಕೆಳ ಜಾತಿಯ ಅರ್ಚಕರುಗಳನ್ನು ನೇಮಿಸಿದ್ದು ನಾರಾಯಣಗುರುಗಳ ಮತ್ತೊಂದು ಕ್ರಾಂತಿಯಾಗಿತ್ತು. 

ಆದರೆ ಎಷ್ಟು ಮಂದಿ ಹಿಂದುಳಿದವರು ಇಂದು ಕೆಳ ಜಾತಿಯ ಅರ್ಚಕರನ್ನು ಕರೆಸುತ್ತಾರೆ, ನಂಬುತ್ತಾರೆ ಎನ್ನುವುದನ್ನು ಪ್ರಶ್ನಿಸಬೇಕಿದೆ ಎಂದರು. 

ನಾರಾಯಣಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ ಗಳಿಸಿ ಎಂದು ಕರೆ ನೀಡುವುದರ ಹಿಂದೆ ಶಾಲಾ ಶಿಕ್ಷಣದ ಜೊತೆಗೆ ಸಾಮಾಜಿಕ‌ ಶಿಕ್ಷಣವನ್ನೂ ಪಡೆಯುವ ಮೂಲಕ ಶೋಷಕ, ಶೋಷಿತ ಮತ್ತು ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತಿ ಹೊಂದಿ ಎನ್ನುವುದಾಗಿತ್ತು. 

ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳಿಗೆ ಮಾತ್ರ ಮಾನ್ಯತೆ ನೀಡಿದರೆ ಅಪಾರ್ಥದ ಆಚರಣೆಗಳಿಗೆ ದಾರಿ ಮಾಡಿ ಕೊಡುತ್ತದೆ. 

ಅಂಬೇಡ್ಕರ್, ನಾರಾಯಣಗುರುಗಳು ಮೀಸಲಾತಿಯನ್ನು ಜಾತ್ಯತೀತ ಸಮಾಜ ನಿರ್ಮಾಣದ ಭಾಗವಾಗಿ ಬೆಂಬಲಿಸಿದ್ದರು. 

ಆದರೆ ಇಂದು ಮೀಸಲಾತಿ ಚಳವಳಿ ಜಾತೀಯತೆಯ ಭಾಗವಾಗಿ ನಡೆಯುತ್ತಿದೆ. ಎಲ್ಲಾ ಜಾತಿಯವರಿಗೂ ಮೀಸಲಾತಿ, ಒಳ ಮೀಸಲಾತಿ ಬೇಕಾಗಿದೆ. ಹೀಗಾಗಿ ಇಂದು ಮೀಸಲಾತಿಯ ಹೋರಾಟ ಜಾತಿ ಸಮಾಜವನ್ನು ಗಟ್ಟಿಗೊಳಿಸುವ ಭಾಗವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ಒಂದು ಮಾತು ಹೇಳ್ತಾರೆ. “ಶಿಕ್ಷಣ ಪಡೆದವರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿದ್ದಾರೆ ಎನ್ನುವ ಮಾತನ್ನು ಪದೇ ಪದೇ ಹೇಳುತ್ತಾರೆ.

ಈ ಎಲ್ಲಾ ಕಾರಣಗಳಿಂದ ಇಂದು ಜಾತ್ಯಾತೀತತೆಯ ಮಾರ್ಯಾದಾ ಹತ್ಯೆ ನಡೆಯುತ್ತಿದೆ. ಜಾತಿ ಜಾತಿಯವರನ್ನೇ ಸುತ್ತ ತುಂಬಿಕೊಂಡು ಓಡಾಡುವುದೇ ದೊಡ್ಡ ಶಕ್ತಿ ಅನ್ನಿಸಿಕೊಳ್ಳುವ ದುರಂತದ ಸಾಮಾಜಿಕ, ರಾಜಕೀಯ ಸಂದರ್ಭವನ್ನು ನಾವು ನೋಡುತ್ತಿದ್ದೇವೆ ಎಂದರು. 

ಆದ್ದರಿಂದ ಧಾರ್ಮಿಕ ಸಹಿಷ್ಣುತೆ ಮತ್ತು ವಿಶ್ವಬಂಧುತ್ವವನ್ನು ಆಚರಿಸುವ ಮೂಲಕ ನಾರಾಯಣಗುರುಗಳ ಆದರ್ಶಗಳಿಗೆ ನಾವು ಚೈತನ್ಯ ತುಂಬಬೇಕಿದೆ ಎಂದರು.

ಯಾವುದೇ ಧರ್ಮವಿರಲಿ, ಮನುಷ್ಯನನ್ನು ಉತ್ತಮಗೊಳಿಸಿದರೆ ಸಾಕು ಎನ್ನುವುದು ಅವರ ವಿಶಾಲ ದೃಷ್ಟಿಕೋನವಾಗಿತ್ತು. ಎಲ್ಲಾ ರೀತಿಯ ತಾರತಮ್ಯದ ಮನಸ್ಥಿತಿಯಿಂದ ಮುಕ್ತವಾದ ಅಪ್ಪಟ ಮನುಷ್ಯನನ್ನು ರೂಪಿಸುವುದೇ ನಾರಾಯಣಗುರುಗಳ ಬದುಕಿನ‌ ಸಂದೇಶವಾಗಿತ್ತು ಎನ್ನುವುದನ್ನು ನಾವುಗಳು ಮರೆಯಬಾರದು ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...