Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...