Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...