Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...