HomeUncategorizedಲಿವ್-ಇನ್ ರಿಲೇಷನ್‌ಶಿಪ್‌ 'ಪ್ರಾಮಾಣಿಕತೆ ಇಲ್ಲದ ಪ್ರೇಮ': ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ರಿಲೇಷನ್‌ಶಿಪ್‌ ‘ಪ್ರಾಮಾಣಿಕತೆ ಇಲ್ಲದ ಪ್ರೇಮ’: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೊಲೀಸ್ ರಕ್ಷಣೆ ಕೋರಿ ಅಂತರ್-ಧರ್ಮೀಯ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿರುವ ಜೋಡಿಗಳು ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ ಎನ್ನುವುದು ಟೈಂಪಾಸ್‌ ಮತ್ತು ಯಾವುದೇ ಸ್ಥಿರತೆ, ಪ್ರಾಮಾಣಿಕತ ಇಲ್ಲದ ಪ್ರೇಮ ಎಂದು ಹೇಳಿದೆ.

ಸುಪ್ರೀಂಕೋರ್ಟ್ ಹಲವಾರು ಸಂದರ್ಭಗಳಲ್ಲಿ ಲಿವ್-ಇನ್ ಸಂಬಂಧಗಳನ್ನು ಮಾನ್ಯ ಮಾಡಿದೆ. ಅರ್ಜಿದಾರರ ವಯಸ್ಸು ಮತ್ತು ಜೊತೆಯಾಗಿ ವಾಸಿಸಿದ ಸಮಯವನ್ನು ಪರಿಗಣಿಸಿ ಇದು ಎಚ್ಚರಿಕೆಯಿಂದ ತೆಗೆದ ನಿರ್ಧಾರವೇ ಎಂದು ಪ್ರಶ್ನಿಸಿದೆ.

20-22 ವರ್ಷ ವಯಸ್ಸಿನಲ್ಲಿ ಎರಡು ತಿಂಗಳ ಅವಧಿಯ ಸಂಬಂಧದಲ್ಲಿ ತಾತ್ಕಾಲಿಕ ಸಂಬಂಧಗಳ ಬಗ್ಗೆ ಜೋಡಿಯು ಗಂಭೀರವಾಗಿ ಯೋಚಿಸಲು ಸಾಧ್ಯವಾಗುತ್ತಾರೆ ಎಂದು ನಾವು ನಿರೀಕ್ಷಿಸಲಾಗುವುದಿಲ್ಲ. ಇದು ಯಾವುದೇ ಪ್ರಾಮಾಣಿಕತೆ ಇಲ್ಲದ ವ್ಯಾಮೋಹವಾಗಿದೆ ಎಂದು ನ್ಯಾಯಮೂರ್ತಿಗಳಾದ ರಾಹುಲ್ ಚತುರ್ವೇದಿ ಮತ್ತು ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ ಅವರ ದ್ವಿಸದಸ್ಯ ಪೀಠವು ಹೇಳಿದೆ.

ಲಿವ್-ಇನ್ ಸಂಬಂಧಗಳು ತಾತ್ಕಾಲಿಕ ಮತ್ತು ಇದು ದುರ್ಬಲವಾಗಿ ಟೈಂಪಾಸ್ ಆಗಿ ಬದಲಾಗುತ್ತವೆ ಎಂದು ನ್ಯಾಯಾಲಯವು ಹೇಳಿದ್ದು, ಜೀವನವು ಗುಲಾಬಿಗಳ ಹಾಸಿಗೆಯಲ್ಲ. ಈ ರೀತಿಯ ಸಂಬಂಧಗಳು ಸಾಮಾನ್ಯವಾಗಿ ಟೈಂಪಾಸ್ ಆಗಿದೆ. ಇದು ತಾತ್ಕಾಲಿಕವಾಗಿ ದುರ್ಬಲ ಎಂದು ಹೇಳಿದ ಕೋರ್ಟ್‌ ಅರ್ಜಿದಾರರಿಗೆ ತನಿಖೆಯ ಹಂತದಲ್ಲಿ ರಕ್ಷಣೆ ನೀಡಲು ನಿರಾಕರಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366ರಡಿಯಲ್ಲಿ ಯುವತಿಯ ಚಿಕ್ಕಮ್ಮ ಯುವಕನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ್ನು ರದ್ದುಗೊಳಿಸಿ ಪೊಲೀಸ್ ರಕ್ಷಣೆ  ನೀಡುವಂತೆ ಕೋರಿ ಜೋಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚಿಕ್ಕಮ್ಮ ಮಹಿಳೆಯ ತಾಯಿ ಎಂದು ಹೇಳಿಕೊಂಡು ಪ್ರಕರಣ ದಾಖಲಿಸಿದ್ದರು. ಆ ವ್ಯಕ್ತಿ ಸರಿಯಿಲ್ಲ ಆತ ತನ್ನ ಸೊಸೆಯ ಜೀವನವನ್ನು ಹಾಳು ಮಾಡುತ್ತಾನೆ. ಉತ್ತರ ಪ್ರದೇಶದಲ್ಲಿ ದರೋಡೆಗೆ ಸಂಬಂಧಿಸಿದ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಈತನ ಮೇಲೆ ಈಗಾಗಲೇ ಕೇಸ್‌ ದಾಖಲಾಗಿದೆ ಎಂದು ದೂರಿನಲ್ಲಿ ಯುವತಿಯ ಚಿಕ್ಕಮ್ಮ ಆರೋಪಿಸಿದ್ದರು.

ಯುವತಿಯು ತನಗೆ 20 ವರ್ಷ ವಯಸ್ಸಾಗಿದ್ದು, ನನ್ನ ಭವಿಷ್ಯವನ್ನು ನಿರ್ಧರಿಸುವ ಹಕ್ಕನ್ನು ನಾನು ಹೊಂದಿದ್ದೇನೆ. ಈ ವಿಚಾರದಲ್ಲಿ ತನ್ನ ತಂದೆ ಪ್ರಕರಣ ದಾಖಲಿಸಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾಳೆ.

ಆದರೆ ವಾದವನ್ನು ಆಲಿಸಿದ ನಂತರ ಎಫ್‌ಐಆರ್ ರದ್ದುಗೊಳಿಸಲು ಸಾಕಷ್ಟು ಆಧಾರ ನೀಡಲಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: 2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....