HomeUncategorizedಲಿವ್-ಇನ್ ರಿಲೇಷನ್‌ಶಿಪ್‌ 'ಪ್ರಾಮಾಣಿಕತೆ ಇಲ್ಲದ ಪ್ರೇಮ': ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ರಿಲೇಷನ್‌ಶಿಪ್‌ ‘ಪ್ರಾಮಾಣಿಕತೆ ಇಲ್ಲದ ಪ್ರೇಮ’: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೊಲೀಸ್ ರಕ್ಷಣೆ ಕೋರಿ ಅಂತರ್-ಧರ್ಮೀಯ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿರುವ ಜೋಡಿಗಳು ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ ಎನ್ನುವುದು ಟೈಂಪಾಸ್‌ ಮತ್ತು ಯಾವುದೇ ಸ್ಥಿರತೆ, ಪ್ರಾಮಾಣಿಕತ ಇಲ್ಲದ ಪ್ರೇಮ ಎಂದು ಹೇಳಿದೆ.

ಸುಪ್ರೀಂಕೋರ್ಟ್ ಹಲವಾರು ಸಂದರ್ಭಗಳಲ್ಲಿ ಲಿವ್-ಇನ್ ಸಂಬಂಧಗಳನ್ನು ಮಾನ್ಯ ಮಾಡಿದೆ. ಅರ್ಜಿದಾರರ ವಯಸ್ಸು ಮತ್ತು ಜೊತೆಯಾಗಿ ವಾಸಿಸಿದ ಸಮಯವನ್ನು ಪರಿಗಣಿಸಿ ಇದು ಎಚ್ಚರಿಕೆಯಿಂದ ತೆಗೆದ ನಿರ್ಧಾರವೇ ಎಂದು ಪ್ರಶ್ನಿಸಿದೆ.

20-22 ವರ್ಷ ವಯಸ್ಸಿನಲ್ಲಿ ಎರಡು ತಿಂಗಳ ಅವಧಿಯ ಸಂಬಂಧದಲ್ಲಿ ತಾತ್ಕಾಲಿಕ ಸಂಬಂಧಗಳ ಬಗ್ಗೆ ಜೋಡಿಯು ಗಂಭೀರವಾಗಿ ಯೋಚಿಸಲು ಸಾಧ್ಯವಾಗುತ್ತಾರೆ ಎಂದು ನಾವು ನಿರೀಕ್ಷಿಸಲಾಗುವುದಿಲ್ಲ. ಇದು ಯಾವುದೇ ಪ್ರಾಮಾಣಿಕತೆ ಇಲ್ಲದ ವ್ಯಾಮೋಹವಾಗಿದೆ ಎಂದು ನ್ಯಾಯಮೂರ್ತಿಗಳಾದ ರಾಹುಲ್ ಚತುರ್ವೇದಿ ಮತ್ತು ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ ಅವರ ದ್ವಿಸದಸ್ಯ ಪೀಠವು ಹೇಳಿದೆ.

ಲಿವ್-ಇನ್ ಸಂಬಂಧಗಳು ತಾತ್ಕಾಲಿಕ ಮತ್ತು ಇದು ದುರ್ಬಲವಾಗಿ ಟೈಂಪಾಸ್ ಆಗಿ ಬದಲಾಗುತ್ತವೆ ಎಂದು ನ್ಯಾಯಾಲಯವು ಹೇಳಿದ್ದು, ಜೀವನವು ಗುಲಾಬಿಗಳ ಹಾಸಿಗೆಯಲ್ಲ. ಈ ರೀತಿಯ ಸಂಬಂಧಗಳು ಸಾಮಾನ್ಯವಾಗಿ ಟೈಂಪಾಸ್ ಆಗಿದೆ. ಇದು ತಾತ್ಕಾಲಿಕವಾಗಿ ದುರ್ಬಲ ಎಂದು ಹೇಳಿದ ಕೋರ್ಟ್‌ ಅರ್ಜಿದಾರರಿಗೆ ತನಿಖೆಯ ಹಂತದಲ್ಲಿ ರಕ್ಷಣೆ ನೀಡಲು ನಿರಾಕರಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366ರಡಿಯಲ್ಲಿ ಯುವತಿಯ ಚಿಕ್ಕಮ್ಮ ಯುವಕನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ್ನು ರದ್ದುಗೊಳಿಸಿ ಪೊಲೀಸ್ ರಕ್ಷಣೆ  ನೀಡುವಂತೆ ಕೋರಿ ಜೋಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚಿಕ್ಕಮ್ಮ ಮಹಿಳೆಯ ತಾಯಿ ಎಂದು ಹೇಳಿಕೊಂಡು ಪ್ರಕರಣ ದಾಖಲಿಸಿದ್ದರು. ಆ ವ್ಯಕ್ತಿ ಸರಿಯಿಲ್ಲ ಆತ ತನ್ನ ಸೊಸೆಯ ಜೀವನವನ್ನು ಹಾಳು ಮಾಡುತ್ತಾನೆ. ಉತ್ತರ ಪ್ರದೇಶದಲ್ಲಿ ದರೋಡೆಗೆ ಸಂಬಂಧಿಸಿದ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಈತನ ಮೇಲೆ ಈಗಾಗಲೇ ಕೇಸ್‌ ದಾಖಲಾಗಿದೆ ಎಂದು ದೂರಿನಲ್ಲಿ ಯುವತಿಯ ಚಿಕ್ಕಮ್ಮ ಆರೋಪಿಸಿದ್ದರು.

ಯುವತಿಯು ತನಗೆ 20 ವರ್ಷ ವಯಸ್ಸಾಗಿದ್ದು, ನನ್ನ ಭವಿಷ್ಯವನ್ನು ನಿರ್ಧರಿಸುವ ಹಕ್ಕನ್ನು ನಾನು ಹೊಂದಿದ್ದೇನೆ. ಈ ವಿಚಾರದಲ್ಲಿ ತನ್ನ ತಂದೆ ಪ್ರಕರಣ ದಾಖಲಿಸಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾಳೆ.

ಆದರೆ ವಾದವನ್ನು ಆಲಿಸಿದ ನಂತರ ಎಫ್‌ಐಆರ್ ರದ್ದುಗೊಳಿಸಲು ಸಾಕಷ್ಟು ಆಧಾರ ನೀಡಲಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: 2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...