HomeUncategorizedಲಿವ್-ಇನ್ ರಿಲೇಷನ್‌ಶಿಪ್‌ 'ಪ್ರಾಮಾಣಿಕತೆ ಇಲ್ಲದ ಪ್ರೇಮ': ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ರಿಲೇಷನ್‌ಶಿಪ್‌ ‘ಪ್ರಾಮಾಣಿಕತೆ ಇಲ್ಲದ ಪ್ರೇಮ’: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೊಲೀಸ್ ರಕ್ಷಣೆ ಕೋರಿ ಅಂತರ್-ಧರ್ಮೀಯ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿರುವ ಜೋಡಿಗಳು ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ ಎನ್ನುವುದು ಟೈಂಪಾಸ್‌ ಮತ್ತು ಯಾವುದೇ ಸ್ಥಿರತೆ, ಪ್ರಾಮಾಣಿಕತ ಇಲ್ಲದ ಪ್ರೇಮ ಎಂದು ಹೇಳಿದೆ.

ಸುಪ್ರೀಂಕೋರ್ಟ್ ಹಲವಾರು ಸಂದರ್ಭಗಳಲ್ಲಿ ಲಿವ್-ಇನ್ ಸಂಬಂಧಗಳನ್ನು ಮಾನ್ಯ ಮಾಡಿದೆ. ಅರ್ಜಿದಾರರ ವಯಸ್ಸು ಮತ್ತು ಜೊತೆಯಾಗಿ ವಾಸಿಸಿದ ಸಮಯವನ್ನು ಪರಿಗಣಿಸಿ ಇದು ಎಚ್ಚರಿಕೆಯಿಂದ ತೆಗೆದ ನಿರ್ಧಾರವೇ ಎಂದು ಪ್ರಶ್ನಿಸಿದೆ.

20-22 ವರ್ಷ ವಯಸ್ಸಿನಲ್ಲಿ ಎರಡು ತಿಂಗಳ ಅವಧಿಯ ಸಂಬಂಧದಲ್ಲಿ ತಾತ್ಕಾಲಿಕ ಸಂಬಂಧಗಳ ಬಗ್ಗೆ ಜೋಡಿಯು ಗಂಭೀರವಾಗಿ ಯೋಚಿಸಲು ಸಾಧ್ಯವಾಗುತ್ತಾರೆ ಎಂದು ನಾವು ನಿರೀಕ್ಷಿಸಲಾಗುವುದಿಲ್ಲ. ಇದು ಯಾವುದೇ ಪ್ರಾಮಾಣಿಕತೆ ಇಲ್ಲದ ವ್ಯಾಮೋಹವಾಗಿದೆ ಎಂದು ನ್ಯಾಯಮೂರ್ತಿಗಳಾದ ರಾಹುಲ್ ಚತುರ್ವೇದಿ ಮತ್ತು ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ ಅವರ ದ್ವಿಸದಸ್ಯ ಪೀಠವು ಹೇಳಿದೆ.

ಲಿವ್-ಇನ್ ಸಂಬಂಧಗಳು ತಾತ್ಕಾಲಿಕ ಮತ್ತು ಇದು ದುರ್ಬಲವಾಗಿ ಟೈಂಪಾಸ್ ಆಗಿ ಬದಲಾಗುತ್ತವೆ ಎಂದು ನ್ಯಾಯಾಲಯವು ಹೇಳಿದ್ದು, ಜೀವನವು ಗುಲಾಬಿಗಳ ಹಾಸಿಗೆಯಲ್ಲ. ಈ ರೀತಿಯ ಸಂಬಂಧಗಳು ಸಾಮಾನ್ಯವಾಗಿ ಟೈಂಪಾಸ್ ಆಗಿದೆ. ಇದು ತಾತ್ಕಾಲಿಕವಾಗಿ ದುರ್ಬಲ ಎಂದು ಹೇಳಿದ ಕೋರ್ಟ್‌ ಅರ್ಜಿದಾರರಿಗೆ ತನಿಖೆಯ ಹಂತದಲ್ಲಿ ರಕ್ಷಣೆ ನೀಡಲು ನಿರಾಕರಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366ರಡಿಯಲ್ಲಿ ಯುವತಿಯ ಚಿಕ್ಕಮ್ಮ ಯುವಕನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ್ನು ರದ್ದುಗೊಳಿಸಿ ಪೊಲೀಸ್ ರಕ್ಷಣೆ  ನೀಡುವಂತೆ ಕೋರಿ ಜೋಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚಿಕ್ಕಮ್ಮ ಮಹಿಳೆಯ ತಾಯಿ ಎಂದು ಹೇಳಿಕೊಂಡು ಪ್ರಕರಣ ದಾಖಲಿಸಿದ್ದರು. ಆ ವ್ಯಕ್ತಿ ಸರಿಯಿಲ್ಲ ಆತ ತನ್ನ ಸೊಸೆಯ ಜೀವನವನ್ನು ಹಾಳು ಮಾಡುತ್ತಾನೆ. ಉತ್ತರ ಪ್ರದೇಶದಲ್ಲಿ ದರೋಡೆಗೆ ಸಂಬಂಧಿಸಿದ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಈತನ ಮೇಲೆ ಈಗಾಗಲೇ ಕೇಸ್‌ ದಾಖಲಾಗಿದೆ ಎಂದು ದೂರಿನಲ್ಲಿ ಯುವತಿಯ ಚಿಕ್ಕಮ್ಮ ಆರೋಪಿಸಿದ್ದರು.

ಯುವತಿಯು ತನಗೆ 20 ವರ್ಷ ವಯಸ್ಸಾಗಿದ್ದು, ನನ್ನ ಭವಿಷ್ಯವನ್ನು ನಿರ್ಧರಿಸುವ ಹಕ್ಕನ್ನು ನಾನು ಹೊಂದಿದ್ದೇನೆ. ಈ ವಿಚಾರದಲ್ಲಿ ತನ್ನ ತಂದೆ ಪ್ರಕರಣ ದಾಖಲಿಸಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾಳೆ.

ಆದರೆ ವಾದವನ್ನು ಆಲಿಸಿದ ನಂತರ ಎಫ್‌ಐಆರ್ ರದ್ದುಗೊಳಿಸಲು ಸಾಕಷ್ಟು ಆಧಾರ ನೀಡಲಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: 2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...