HomeUncategorizedಲಿವ್-ಇನ್ ರಿಲೇಷನ್‌ಶಿಪ್‌ 'ಪ್ರಾಮಾಣಿಕತೆ ಇಲ್ಲದ ಪ್ರೇಮ': ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ರಿಲೇಷನ್‌ಶಿಪ್‌ ‘ಪ್ರಾಮಾಣಿಕತೆ ಇಲ್ಲದ ಪ್ರೇಮ’: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೊಲೀಸ್ ರಕ್ಷಣೆ ಕೋರಿ ಅಂತರ್-ಧರ್ಮೀಯ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿರುವ ಜೋಡಿಗಳು ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ ಎನ್ನುವುದು ಟೈಂಪಾಸ್‌ ಮತ್ತು ಯಾವುದೇ ಸ್ಥಿರತೆ, ಪ್ರಾಮಾಣಿಕತ ಇಲ್ಲದ ಪ್ರೇಮ ಎಂದು ಹೇಳಿದೆ.

ಸುಪ್ರೀಂಕೋರ್ಟ್ ಹಲವಾರು ಸಂದರ್ಭಗಳಲ್ಲಿ ಲಿವ್-ಇನ್ ಸಂಬಂಧಗಳನ್ನು ಮಾನ್ಯ ಮಾಡಿದೆ. ಅರ್ಜಿದಾರರ ವಯಸ್ಸು ಮತ್ತು ಜೊತೆಯಾಗಿ ವಾಸಿಸಿದ ಸಮಯವನ್ನು ಪರಿಗಣಿಸಿ ಇದು ಎಚ್ಚರಿಕೆಯಿಂದ ತೆಗೆದ ನಿರ್ಧಾರವೇ ಎಂದು ಪ್ರಶ್ನಿಸಿದೆ.

20-22 ವರ್ಷ ವಯಸ್ಸಿನಲ್ಲಿ ಎರಡು ತಿಂಗಳ ಅವಧಿಯ ಸಂಬಂಧದಲ್ಲಿ ತಾತ್ಕಾಲಿಕ ಸಂಬಂಧಗಳ ಬಗ್ಗೆ ಜೋಡಿಯು ಗಂಭೀರವಾಗಿ ಯೋಚಿಸಲು ಸಾಧ್ಯವಾಗುತ್ತಾರೆ ಎಂದು ನಾವು ನಿರೀಕ್ಷಿಸಲಾಗುವುದಿಲ್ಲ. ಇದು ಯಾವುದೇ ಪ್ರಾಮಾಣಿಕತೆ ಇಲ್ಲದ ವ್ಯಾಮೋಹವಾಗಿದೆ ಎಂದು ನ್ಯಾಯಮೂರ್ತಿಗಳಾದ ರಾಹುಲ್ ಚತುರ್ವೇದಿ ಮತ್ತು ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ ಅವರ ದ್ವಿಸದಸ್ಯ ಪೀಠವು ಹೇಳಿದೆ.

ಲಿವ್-ಇನ್ ಸಂಬಂಧಗಳು ತಾತ್ಕಾಲಿಕ ಮತ್ತು ಇದು ದುರ್ಬಲವಾಗಿ ಟೈಂಪಾಸ್ ಆಗಿ ಬದಲಾಗುತ್ತವೆ ಎಂದು ನ್ಯಾಯಾಲಯವು ಹೇಳಿದ್ದು, ಜೀವನವು ಗುಲಾಬಿಗಳ ಹಾಸಿಗೆಯಲ್ಲ. ಈ ರೀತಿಯ ಸಂಬಂಧಗಳು ಸಾಮಾನ್ಯವಾಗಿ ಟೈಂಪಾಸ್ ಆಗಿದೆ. ಇದು ತಾತ್ಕಾಲಿಕವಾಗಿ ದುರ್ಬಲ ಎಂದು ಹೇಳಿದ ಕೋರ್ಟ್‌ ಅರ್ಜಿದಾರರಿಗೆ ತನಿಖೆಯ ಹಂತದಲ್ಲಿ ರಕ್ಷಣೆ ನೀಡಲು ನಿರಾಕರಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366ರಡಿಯಲ್ಲಿ ಯುವತಿಯ ಚಿಕ್ಕಮ್ಮ ಯುವಕನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ್ನು ರದ್ದುಗೊಳಿಸಿ ಪೊಲೀಸ್ ರಕ್ಷಣೆ  ನೀಡುವಂತೆ ಕೋರಿ ಜೋಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚಿಕ್ಕಮ್ಮ ಮಹಿಳೆಯ ತಾಯಿ ಎಂದು ಹೇಳಿಕೊಂಡು ಪ್ರಕರಣ ದಾಖಲಿಸಿದ್ದರು. ಆ ವ್ಯಕ್ತಿ ಸರಿಯಿಲ್ಲ ಆತ ತನ್ನ ಸೊಸೆಯ ಜೀವನವನ್ನು ಹಾಳು ಮಾಡುತ್ತಾನೆ. ಉತ್ತರ ಪ್ರದೇಶದಲ್ಲಿ ದರೋಡೆಗೆ ಸಂಬಂಧಿಸಿದ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಈತನ ಮೇಲೆ ಈಗಾಗಲೇ ಕೇಸ್‌ ದಾಖಲಾಗಿದೆ ಎಂದು ದೂರಿನಲ್ಲಿ ಯುವತಿಯ ಚಿಕ್ಕಮ್ಮ ಆರೋಪಿಸಿದ್ದರು.

ಯುವತಿಯು ತನಗೆ 20 ವರ್ಷ ವಯಸ್ಸಾಗಿದ್ದು, ನನ್ನ ಭವಿಷ್ಯವನ್ನು ನಿರ್ಧರಿಸುವ ಹಕ್ಕನ್ನು ನಾನು ಹೊಂದಿದ್ದೇನೆ. ಈ ವಿಚಾರದಲ್ಲಿ ತನ್ನ ತಂದೆ ಪ್ರಕರಣ ದಾಖಲಿಸಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾಳೆ.

ಆದರೆ ವಾದವನ್ನು ಆಲಿಸಿದ ನಂತರ ಎಫ್‌ಐಆರ್ ರದ್ದುಗೊಳಿಸಲು ಸಾಕಷ್ಟು ಆಧಾರ ನೀಡಲಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: 2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...