Homeಮುಖಪುಟಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌...

ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಧುನಿಕ ಕಾಲದ ‘ತಾತ್ವಿಕ ರಾಜ’ ಎಂದು ಶ್ಲಾಘಿಸಿ, ದೇಶದಲ್ಲಿ ಕೋಮುಗಲಭೆಗಳಿಗೆ ‘ಮುಸ್ಲಿಮರೇ ಕಾರಣ’ ಎಂದು ಹೇಳಿದ್ದ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಧೀಶರ  ವಿವಾದಾತ್ಮಕ ಹೇಳಿಕೆಯನ್ನು ಅಲಹಾಬಾದ್ ಹೈಕೋರ್ಟ್ ಅಳಿಸಿ ಹಾಕಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಮಾರ್ಚ್ 5ರಂದು ಮಾಡಿದ ಟೀಕೆಗಳು ರಾಜಕೀಯ ಪ್ರೇರಿತವಾಗಿದೆ ಮತ್ತು ವೈಯಕ್ತಿಕ ಅಭಿಪ್ರಾಯಗಳನ್ನು ಒಳಗೊಂಡಿರುವ ಅನಗತ್ಯ ಅಭಿವ್ಯಕ್ತಿಯಾಗಿದೆ ಎಂದು ಅಲಹಬಾದ್‌ ಹೈಕೋರ್ಟ್‌ ಹೇಳಿದೆ. 2010ರ ಬರೇಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರ ಈ ವಿವಾದಾತ್ಮಕ ಟೀಕೆಗಳನ್ನು ಮಾಡಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರ ಗುಂಪು ಜಡ್ಜ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಬರೇಲಿ ಗಲಭೆಯ ಮುಖ್ಯ ಸೂತ್ರಧಾರ ಎಂದು ಹೇಳಲಾಗಿದ್ದ ಮೌಲಾನಾ ತೌಕೀರ್ ರಜಾ ಖಾನ್ ಅವರು ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶ ದಿವಾಕರ್ ಅವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಂಡಿದ್ದಕ್ಕಾಗಿ ಹೈಕೋರ್ಟ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗದ ಆದೇಶವನ್ನು ನೀಡುವಾಗ ಇಂತದ್ದೆಲ್ಲಾ ಅಗತ್ಯವಿಲ್ಲ ಎಂದು ಜಸ್ಟಿಸ್‌ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರು ಹೇಳಿದ್ದಾರೆ.

ನ್ಯಾಯಾಂಗ ಅಧಿಕಾರಿಯು ಈ ವಿಷಯದಲ್ಲಿ ತನ್ನ ವೈಯಕ್ತಿಕ ಅಥವಾ ಪೂರ್ವ ಕಲ್ಪಿತ ಕಲ್ಪನೆಗಳು ಅಥವಾ ಒಲವುಗಳನ್ನು ವ್ಯಕ್ತಪಡಿಸುವುದಾಗಿ ನಿರೀಕ್ಷಿಸುವುದಿಲ್ಲ. ಅಂತಹ ಆದೇಶವನ್ನು ಜನಸಾಮಾನ್ಯರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ ಜಸ್ಟಿಸ್ ನಾರಾಯಣ ಮಿಶ್ರಾ, ನ್ಯಾ.ದಿವಾಕರ ಅವರ ಮಾ.5ರ ಆದೇಶದ ಆರನೇ ಪುಟದ ಕೊನೆಯ ಪ್ಯಾರಾದಿಂದ 8ನೇ ಪುಟದ ಮಧ್ಯದವರೆಗಿನ ಭಾಗವನ್ನು ತೆಗೆಯುವಂತೆ ಆದೇಶಿಸಿದ್ದಾರೆ.

ಮಾರ್ಚ್ 5ರಂದು ನ್ಯಾಯಾಧೀಶ ದಿವಾಕರ್ 2010ರಲ್ಲಿ ಬರೇಲಿಯಲ್ಲಿ ನಡೆದ ಕೋಮು ಹಿಂಸಾಚಾರದ ಪ್ರಕರಣದಲ್ಲಿ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನಾ ಖಾನ್ ವಿರುದ್ಧದ ಕೊಲೆ ಯತ್ನ ಸೇರಿದಂತೆ ಗಂಭೀರ ಕ್ರಿಮಿನಲ್ ಆರೋಪಗಳ ಕುರಿತು ವಿಚಾರಣೆ ನಡೆಸುವಾಗ ಅಧಿಕಾರ ಸ್ಥಾನಗಳಲ್ಲಿರುವವರು ಧಾರ್ಮಿಕ ವ್ಯಕ್ತಿಗಳಾಗಿರಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದಾರೆ ಎಂದಿದ್ದರು. ಅವರು ಆದಿತ್ಯನಾಥ್ ಅವರ ಧಾರ್ಮಿಕ ಹಿನ್ನೆಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ದೇಶದಲ್ಲಿ ಗಲಭೆಗಳನ್ನು ನಿರ್ದಿಷ್ಟ ಸಮುದಾಯದ ಮೇಲೆ ಹೊರಿಸುವ ಪ್ರಯತ್ನವನ್ನು ಮಾಡಿದ್ದರು.

ಭಾರತದಲ್ಲಿ ಗಲಭೆಗಳಿಗೆ ಮುಖ್ಯ ಕಾರಣ ಇಲ್ಲಿನ ರಾಜಕೀಯ ಪಕ್ಷಗಳು ನಿರ್ದಿಷ್ಟ ಧರ್ಮದ ತುಷ್ಟೀಕರಣದಲ್ಲಿ ತೊಡಗಿಕೊಂಡಿರುವುದಾಗಿದೆ ಎಂದು ಜಸ್ಟಿಸ್ ದಿವಾಕರ್‌ ಹೇಳಿದ್ದು, ಆ ನಿರ್ದಿಷ್ಟ ಧರ್ಮದ ಪ್ರಮುಖರ ನೈತಿಕ ಸ್ಥೈರ್ಯ ಎಷ್ಟರ ಮಟ್ಟಿಗೆ ಹೆಚ್ಚುತ್ತದೆ ಎಂದರೆ ಅವರು ಗಲಭೆ ಎಬ್ಬಿಸಿದರೂ ಅಧಿಕಾರದ ರಕ್ಷಣೆಯಿಂದ ತಮಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಹೇಳಿದ್ದರು.

2010ರ ಬರೇಲಿ ಗಲಭೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಧೀಶರಾದ ದಿವಾಕರ್ ಅವರು ಚಾರ್ಜ್‌ಶೀಟ್‌ನಲ್ಲಿ ಖಾನ್ ಅವರ ಹೆಸರನ್ನು ಸೇರಿಸಿದರು ಮತ್ತು ಮಾರ್ಚ್ 11ರಂದು ಅವರ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಖಾನ್ ಅವರು ಬರೇಲ್ವಿ ಪಂಥದ ಪ್ರಮುಖ ಧರ್ಮಗುರು ಮತ್ತು ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಮಾರ್ಚ್ 2, 2010ರಂದು ಬರೇಲಿಯಲ್ಲಿ ಮುಸ್ಲಿಂ ಧಾರ್ಮಿಕ ಮೆರವಣಿಗೆಯ ಮಾರ್ಗದ ಬಗ್ಗೆ ವಿವಾದ ಉಂಟಾದ ನಂತರ ನಡೆದ ಗಲಭೆಯ ಮುಖ್ಯ ಸೂತ್ರಧಾರ ಎಂದು ನ್ಯಾಯಾಧೀಶರು ಖಾನ್ ಅವರನ್ನು ಹೆಸರಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ನಗರದಲ್ಲಿ ಹಲವು ದಿನಗಳಿಂದ ಕರ್ಫ್ಯೂ ಹೇರಲಾಗಿತ್ತು.

ಇದನ್ನು ಓದಿ: ಸಿಎಎ: ಮುಸ್ಲಿಮರ ಮೇಲಿನ ಪ್ರಭಾವದ ಬಗ್ಗೆ ಯುಎಸ್ ಸೆನೆಟರ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...