Homeಮುಖಪುಟಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌...

ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಧುನಿಕ ಕಾಲದ ‘ತಾತ್ವಿಕ ರಾಜ’ ಎಂದು ಶ್ಲಾಘಿಸಿ, ದೇಶದಲ್ಲಿ ಕೋಮುಗಲಭೆಗಳಿಗೆ ‘ಮುಸ್ಲಿಮರೇ ಕಾರಣ’ ಎಂದು ಹೇಳಿದ್ದ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಧೀಶರ  ವಿವಾದಾತ್ಮಕ ಹೇಳಿಕೆಯನ್ನು ಅಲಹಾಬಾದ್ ಹೈಕೋರ್ಟ್ ಅಳಿಸಿ ಹಾಕಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಮಾರ್ಚ್ 5ರಂದು ಮಾಡಿದ ಟೀಕೆಗಳು ರಾಜಕೀಯ ಪ್ರೇರಿತವಾಗಿದೆ ಮತ್ತು ವೈಯಕ್ತಿಕ ಅಭಿಪ್ರಾಯಗಳನ್ನು ಒಳಗೊಂಡಿರುವ ಅನಗತ್ಯ ಅಭಿವ್ಯಕ್ತಿಯಾಗಿದೆ ಎಂದು ಅಲಹಬಾದ್‌ ಹೈಕೋರ್ಟ್‌ ಹೇಳಿದೆ. 2010ರ ಬರೇಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರ ಈ ವಿವಾದಾತ್ಮಕ ಟೀಕೆಗಳನ್ನು ಮಾಡಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರ ಗುಂಪು ಜಡ್ಜ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಬರೇಲಿ ಗಲಭೆಯ ಮುಖ್ಯ ಸೂತ್ರಧಾರ ಎಂದು ಹೇಳಲಾಗಿದ್ದ ಮೌಲಾನಾ ತೌಕೀರ್ ರಜಾ ಖಾನ್ ಅವರು ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶ ದಿವಾಕರ್ ಅವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಂಡಿದ್ದಕ್ಕಾಗಿ ಹೈಕೋರ್ಟ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗದ ಆದೇಶವನ್ನು ನೀಡುವಾಗ ಇಂತದ್ದೆಲ್ಲಾ ಅಗತ್ಯವಿಲ್ಲ ಎಂದು ಜಸ್ಟಿಸ್‌ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರು ಹೇಳಿದ್ದಾರೆ.

ನ್ಯಾಯಾಂಗ ಅಧಿಕಾರಿಯು ಈ ವಿಷಯದಲ್ಲಿ ತನ್ನ ವೈಯಕ್ತಿಕ ಅಥವಾ ಪೂರ್ವ ಕಲ್ಪಿತ ಕಲ್ಪನೆಗಳು ಅಥವಾ ಒಲವುಗಳನ್ನು ವ್ಯಕ್ತಪಡಿಸುವುದಾಗಿ ನಿರೀಕ್ಷಿಸುವುದಿಲ್ಲ. ಅಂತಹ ಆದೇಶವನ್ನು ಜನಸಾಮಾನ್ಯರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ ಜಸ್ಟಿಸ್ ನಾರಾಯಣ ಮಿಶ್ರಾ, ನ್ಯಾ.ದಿವಾಕರ ಅವರ ಮಾ.5ರ ಆದೇಶದ ಆರನೇ ಪುಟದ ಕೊನೆಯ ಪ್ಯಾರಾದಿಂದ 8ನೇ ಪುಟದ ಮಧ್ಯದವರೆಗಿನ ಭಾಗವನ್ನು ತೆಗೆಯುವಂತೆ ಆದೇಶಿಸಿದ್ದಾರೆ.

ಮಾರ್ಚ್ 5ರಂದು ನ್ಯಾಯಾಧೀಶ ದಿವಾಕರ್ 2010ರಲ್ಲಿ ಬರೇಲಿಯಲ್ಲಿ ನಡೆದ ಕೋಮು ಹಿಂಸಾಚಾರದ ಪ್ರಕರಣದಲ್ಲಿ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನಾ ಖಾನ್ ವಿರುದ್ಧದ ಕೊಲೆ ಯತ್ನ ಸೇರಿದಂತೆ ಗಂಭೀರ ಕ್ರಿಮಿನಲ್ ಆರೋಪಗಳ ಕುರಿತು ವಿಚಾರಣೆ ನಡೆಸುವಾಗ ಅಧಿಕಾರ ಸ್ಥಾನಗಳಲ್ಲಿರುವವರು ಧಾರ್ಮಿಕ ವ್ಯಕ್ತಿಗಳಾಗಿರಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದಾರೆ ಎಂದಿದ್ದರು. ಅವರು ಆದಿತ್ಯನಾಥ್ ಅವರ ಧಾರ್ಮಿಕ ಹಿನ್ನೆಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ದೇಶದಲ್ಲಿ ಗಲಭೆಗಳನ್ನು ನಿರ್ದಿಷ್ಟ ಸಮುದಾಯದ ಮೇಲೆ ಹೊರಿಸುವ ಪ್ರಯತ್ನವನ್ನು ಮಾಡಿದ್ದರು.

ಭಾರತದಲ್ಲಿ ಗಲಭೆಗಳಿಗೆ ಮುಖ್ಯ ಕಾರಣ ಇಲ್ಲಿನ ರಾಜಕೀಯ ಪಕ್ಷಗಳು ನಿರ್ದಿಷ್ಟ ಧರ್ಮದ ತುಷ್ಟೀಕರಣದಲ್ಲಿ ತೊಡಗಿಕೊಂಡಿರುವುದಾಗಿದೆ ಎಂದು ಜಸ್ಟಿಸ್ ದಿವಾಕರ್‌ ಹೇಳಿದ್ದು, ಆ ನಿರ್ದಿಷ್ಟ ಧರ್ಮದ ಪ್ರಮುಖರ ನೈತಿಕ ಸ್ಥೈರ್ಯ ಎಷ್ಟರ ಮಟ್ಟಿಗೆ ಹೆಚ್ಚುತ್ತದೆ ಎಂದರೆ ಅವರು ಗಲಭೆ ಎಬ್ಬಿಸಿದರೂ ಅಧಿಕಾರದ ರಕ್ಷಣೆಯಿಂದ ತಮಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಹೇಳಿದ್ದರು.

2010ರ ಬರೇಲಿ ಗಲಭೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಧೀಶರಾದ ದಿವಾಕರ್ ಅವರು ಚಾರ್ಜ್‌ಶೀಟ್‌ನಲ್ಲಿ ಖಾನ್ ಅವರ ಹೆಸರನ್ನು ಸೇರಿಸಿದರು ಮತ್ತು ಮಾರ್ಚ್ 11ರಂದು ಅವರ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಖಾನ್ ಅವರು ಬರೇಲ್ವಿ ಪಂಥದ ಪ್ರಮುಖ ಧರ್ಮಗುರು ಮತ್ತು ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಮಾರ್ಚ್ 2, 2010ರಂದು ಬರೇಲಿಯಲ್ಲಿ ಮುಸ್ಲಿಂ ಧಾರ್ಮಿಕ ಮೆರವಣಿಗೆಯ ಮಾರ್ಗದ ಬಗ್ಗೆ ವಿವಾದ ಉಂಟಾದ ನಂತರ ನಡೆದ ಗಲಭೆಯ ಮುಖ್ಯ ಸೂತ್ರಧಾರ ಎಂದು ನ್ಯಾಯಾಧೀಶರು ಖಾನ್ ಅವರನ್ನು ಹೆಸರಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ನಗರದಲ್ಲಿ ಹಲವು ದಿನಗಳಿಂದ ಕರ್ಫ್ಯೂ ಹೇರಲಾಗಿತ್ತು.

ಇದನ್ನು ಓದಿ: ಸಿಎಎ: ಮುಸ್ಲಿಮರ ಮೇಲಿನ ಪ್ರಭಾವದ ಬಗ್ಗೆ ಯುಎಸ್ ಸೆನೆಟರ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...