Homeಮುಖಪುಟಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌...

ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಧುನಿಕ ಕಾಲದ ‘ತಾತ್ವಿಕ ರಾಜ’ ಎಂದು ಶ್ಲಾಘಿಸಿ, ದೇಶದಲ್ಲಿ ಕೋಮುಗಲಭೆಗಳಿಗೆ ‘ಮುಸ್ಲಿಮರೇ ಕಾರಣ’ ಎಂದು ಹೇಳಿದ್ದ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಧೀಶರ  ವಿವಾದಾತ್ಮಕ ಹೇಳಿಕೆಯನ್ನು ಅಲಹಾಬಾದ್ ಹೈಕೋರ್ಟ್ ಅಳಿಸಿ ಹಾಕಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಮಾರ್ಚ್ 5ರಂದು ಮಾಡಿದ ಟೀಕೆಗಳು ರಾಜಕೀಯ ಪ್ರೇರಿತವಾಗಿದೆ ಮತ್ತು ವೈಯಕ್ತಿಕ ಅಭಿಪ್ರಾಯಗಳನ್ನು ಒಳಗೊಂಡಿರುವ ಅನಗತ್ಯ ಅಭಿವ್ಯಕ್ತಿಯಾಗಿದೆ ಎಂದು ಅಲಹಬಾದ್‌ ಹೈಕೋರ್ಟ್‌ ಹೇಳಿದೆ. 2010ರ ಬರೇಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರ ಈ ವಿವಾದಾತ್ಮಕ ಟೀಕೆಗಳನ್ನು ಮಾಡಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರ ಗುಂಪು ಜಡ್ಜ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಬರೇಲಿ ಗಲಭೆಯ ಮುಖ್ಯ ಸೂತ್ರಧಾರ ಎಂದು ಹೇಳಲಾಗಿದ್ದ ಮೌಲಾನಾ ತೌಕೀರ್ ರಜಾ ಖಾನ್ ಅವರು ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶ ದಿವಾಕರ್ ಅವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಂಡಿದ್ದಕ್ಕಾಗಿ ಹೈಕೋರ್ಟ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗದ ಆದೇಶವನ್ನು ನೀಡುವಾಗ ಇಂತದ್ದೆಲ್ಲಾ ಅಗತ್ಯವಿಲ್ಲ ಎಂದು ಜಸ್ಟಿಸ್‌ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರು ಹೇಳಿದ್ದಾರೆ.

ನ್ಯಾಯಾಂಗ ಅಧಿಕಾರಿಯು ಈ ವಿಷಯದಲ್ಲಿ ತನ್ನ ವೈಯಕ್ತಿಕ ಅಥವಾ ಪೂರ್ವ ಕಲ್ಪಿತ ಕಲ್ಪನೆಗಳು ಅಥವಾ ಒಲವುಗಳನ್ನು ವ್ಯಕ್ತಪಡಿಸುವುದಾಗಿ ನಿರೀಕ್ಷಿಸುವುದಿಲ್ಲ. ಅಂತಹ ಆದೇಶವನ್ನು ಜನಸಾಮಾನ್ಯರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ ಜಸ್ಟಿಸ್ ನಾರಾಯಣ ಮಿಶ್ರಾ, ನ್ಯಾ.ದಿವಾಕರ ಅವರ ಮಾ.5ರ ಆದೇಶದ ಆರನೇ ಪುಟದ ಕೊನೆಯ ಪ್ಯಾರಾದಿಂದ 8ನೇ ಪುಟದ ಮಧ್ಯದವರೆಗಿನ ಭಾಗವನ್ನು ತೆಗೆಯುವಂತೆ ಆದೇಶಿಸಿದ್ದಾರೆ.

ಮಾರ್ಚ್ 5ರಂದು ನ್ಯಾಯಾಧೀಶ ದಿವಾಕರ್ 2010ರಲ್ಲಿ ಬರೇಲಿಯಲ್ಲಿ ನಡೆದ ಕೋಮು ಹಿಂಸಾಚಾರದ ಪ್ರಕರಣದಲ್ಲಿ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನಾ ಖಾನ್ ವಿರುದ್ಧದ ಕೊಲೆ ಯತ್ನ ಸೇರಿದಂತೆ ಗಂಭೀರ ಕ್ರಿಮಿನಲ್ ಆರೋಪಗಳ ಕುರಿತು ವಿಚಾರಣೆ ನಡೆಸುವಾಗ ಅಧಿಕಾರ ಸ್ಥಾನಗಳಲ್ಲಿರುವವರು ಧಾರ್ಮಿಕ ವ್ಯಕ್ತಿಗಳಾಗಿರಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದಾರೆ ಎಂದಿದ್ದರು. ಅವರು ಆದಿತ್ಯನಾಥ್ ಅವರ ಧಾರ್ಮಿಕ ಹಿನ್ನೆಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ದೇಶದಲ್ಲಿ ಗಲಭೆಗಳನ್ನು ನಿರ್ದಿಷ್ಟ ಸಮುದಾಯದ ಮೇಲೆ ಹೊರಿಸುವ ಪ್ರಯತ್ನವನ್ನು ಮಾಡಿದ್ದರು.

ಭಾರತದಲ್ಲಿ ಗಲಭೆಗಳಿಗೆ ಮುಖ್ಯ ಕಾರಣ ಇಲ್ಲಿನ ರಾಜಕೀಯ ಪಕ್ಷಗಳು ನಿರ್ದಿಷ್ಟ ಧರ್ಮದ ತುಷ್ಟೀಕರಣದಲ್ಲಿ ತೊಡಗಿಕೊಂಡಿರುವುದಾಗಿದೆ ಎಂದು ಜಸ್ಟಿಸ್ ದಿವಾಕರ್‌ ಹೇಳಿದ್ದು, ಆ ನಿರ್ದಿಷ್ಟ ಧರ್ಮದ ಪ್ರಮುಖರ ನೈತಿಕ ಸ್ಥೈರ್ಯ ಎಷ್ಟರ ಮಟ್ಟಿಗೆ ಹೆಚ್ಚುತ್ತದೆ ಎಂದರೆ ಅವರು ಗಲಭೆ ಎಬ್ಬಿಸಿದರೂ ಅಧಿಕಾರದ ರಕ್ಷಣೆಯಿಂದ ತಮಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಹೇಳಿದ್ದರು.

2010ರ ಬರೇಲಿ ಗಲಭೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಧೀಶರಾದ ದಿವಾಕರ್ ಅವರು ಚಾರ್ಜ್‌ಶೀಟ್‌ನಲ್ಲಿ ಖಾನ್ ಅವರ ಹೆಸರನ್ನು ಸೇರಿಸಿದರು ಮತ್ತು ಮಾರ್ಚ್ 11ರಂದು ಅವರ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಖಾನ್ ಅವರು ಬರೇಲ್ವಿ ಪಂಥದ ಪ್ರಮುಖ ಧರ್ಮಗುರು ಮತ್ತು ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಮಾರ್ಚ್ 2, 2010ರಂದು ಬರೇಲಿಯಲ್ಲಿ ಮುಸ್ಲಿಂ ಧಾರ್ಮಿಕ ಮೆರವಣಿಗೆಯ ಮಾರ್ಗದ ಬಗ್ಗೆ ವಿವಾದ ಉಂಟಾದ ನಂತರ ನಡೆದ ಗಲಭೆಯ ಮುಖ್ಯ ಸೂತ್ರಧಾರ ಎಂದು ನ್ಯಾಯಾಧೀಶರು ಖಾನ್ ಅವರನ್ನು ಹೆಸರಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ನಗರದಲ್ಲಿ ಹಲವು ದಿನಗಳಿಂದ ಕರ್ಫ್ಯೂ ಹೇರಲಾಗಿತ್ತು.

ಇದನ್ನು ಓದಿ: ಸಿಎಎ: ಮುಸ್ಲಿಮರ ಮೇಲಿನ ಪ್ರಭಾವದ ಬಗ್ಗೆ ಯುಎಸ್ ಸೆನೆಟರ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...