Homeಮುಖಪುಟಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ (ಫೆ.17) ವರದಿ ಮಾಡಿದೆ.

ನ್ಯಾಯಾಧೀಶರಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಫೆಬ್ರವರಿ 12ರಂದು ಇಬ್ಬರು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ ಕಾಯ್ದೆ 1971’ರ ಅಡಿಯಲ್ಲಿ ಕ್ರಮ ಜರುಗಿಸಿದೆ. ಇದೇ ವೇಳೆ ಅರ್ಜಿದಾರ ತಾರಿಕ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಿರುವ ಹೈಕೋರ್ಟ್, ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೋರಿದೆ ಎಂದು ವರದಿ ವಿವರಿಸಿದೆ.

ನಮ್ಮ ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಖಾಸಗಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದು ನಾಗರಿಕರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಜನವರಿ 16ರಂದು ರೇಷ್ಮಾ ಖಾನ್ ಎಂಬುವವರಿಗೆ ಸೇರಿದ ಖಾಲಿ ಮನೆಯೊಳಗೆ ನಮಾಝ್ ಮಾಡಿದ ಗುಂಪನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಪ್ರಾರ್ಥನೆಯು ಸಂಪೂರ್ಣವಾಗಿ ತನ್ನ ಖಾಸಗಿ ಆವರಣದೊಳಗೆ ನಡೆದಿದ್ದು, ಇದಕ್ಕೆ ತಾನು ಅನುಮತಿ ನೀಡಿರುವುದಾಗಿ ರೇಷ್ಮಾ ಖಾನ್ ತಿಳಿಸಿದ್ದರು.

ಪೊಲೀಸರ ಕ್ರಮದ ವಿರುದ್ದ ಈ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಂಬಂಧಿಸಿದ ‘ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಉತ್ತರ ಪ್ರದೇಶ ಸರ್ಕಾರ’ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಾರಿಖ್ ಖಾನ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ಹೇಳಿತ್ತು.

ಅರ್ಜಿದಾರ ತಾರಿಖ್ ಖಾನ್ ಪ್ರತಿಕ್ರಿಯಿಸಿ, “ಜನವರಿ 27ರಂದು ಹೊರಡಿಸಲಾದ ನ್ಯಾಯಾಲಯದ ಆದೇಶವು ಮತ್ತೊಂದು ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ನಾವೂ ಸಹ ಅಲ್ಪಸಂಖ್ಯಾತ ಸಮುದಾಯದವರೇ ಆಗಿರುವುದರಿಂದ, ಅದೇ ನಿಯಮ ನಮಗೂ ಅನ್ವಯಿಸಬೇಕು. ಇಲ್ಲಿಯವರೆಗೆ ನ್ಯಾಯಾಲಯದ ತಡೆಯಾಜ್ಞೆಯು ನಮಗೆ ರಕ್ಷಣೆ ನೀಡಿದೆ, ಆ ಕಾರಣಕ್ಕಾಗಿಯೇ ನಾವು ಮನೆಯಲ್ಲಿ ನಮ್ಮ ಪ್ರಾರ್ಥನೆಯನ್ನು ಪುನರಾರಂಭಿಸಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಹಿರಿಯ ಹೈಕೋರ್ಟ್ ವಕೀಲರಾದ ಎಸ್‌ಎಫ್‌ಎ ನಖ್ವಿ ಅವರು ನ್ಯಾಯಾಲಯದ ಆದೇಶ ಮತ್ತು ಹಿಂದೂ ನಿವಾಸಿಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ತೀರ್ಪು ಯಾವುದೇ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಈ ಆದೇಶವು ಸ್ವಯಂ ವಿವರಣಾತ್ಮಕವಾಗಿದೆ. ಒಂದು ಕಡೆ, ಖಾಸಗಿ ಜಾಗದಲ್ಲಿ ಪ್ರಾರ್ಥನೆ ನಡೆಸುವ ಅರ್ಜಿದಾರರ ಸಾಂವಿಧಾನಿಕ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಮತ್ತೊಂದು ಕಡೆ, ಈ ವಿಷಯದಲ್ಲಿ ಯಾವುದೇ ನಿಷೇಧಾಜ್ಞೆ ಹೊರಡಿಸಿಲ್ಲ ಎಂದು ಸ್ವತಃ ರಾಜ್ಯ ಸರ್ಕಾರವೇ ನ್ಯಾಯಾಲಯಕ್ಕೆ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಈ ಕ್ರಮವು ಕಾನೂನುಬಾಹಿರ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಆಡಳಿತಾತ್ಮಕ ಜವಾಬ್ದಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯೇ ಹೊರತು ಖಾಸಗಿ ವ್ಯಕ್ತಿಗಳದ್ದಲ್ಲ. ಒಂದು ವೇಳೆ ಪ್ರಾರ್ಥನೆ ನಡೆಸುವುದರ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೆ, ಸರ್ಕಾರವು ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು. ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುತ್ತಿರುವ ವ್ಯಕ್ತಿಗಳ ಬದಲಿಗೆ, ಕಾನೂನುಬದ್ಧ ಧಾರ್ಮಿಕ ಆಚರಣೆಯನ್ನು ವಿರೋಧಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಖ್ವಿ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ನಡುವೆ ಮೊಹಮ್ಮದ್‌ಗಂಜ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮನೆಯಲ್ಲಿ ಶುಕ್ರವಾರದ ನಮಾಝ್ ಪುನರಾರಂಭಿಸುವುದಕ್ಕೆ ಕೆಲವು ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾರದ ಪ್ರಾರ್ಥನಾ ಸಭೆಗಳನ್ನು ಬೇರೆ ಬೇರೆ ಖಾಸಗಿ ಮನೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿರುವ ಐದು ಕುಟುಂಬಗಳು, ಈ ವಸತಿ ಆಸ್ತಿಯು ಕಾಲಾನಂತರದಲ್ಲಿ ಶಾಶ್ವತ ಪ್ರಾರ್ಥನಾ ಮಂದಿರವಾಗಿ ಮಾರ್ಪಡಬಹುದು ಎಂಬ ಆತಂಕ ವ್ಯಕ್ತಪಡಿಸಿ ತಮ್ಮ ಮನೆಗಳ ಹೊರಗೋಡೆಗಳ ಮೇಲೆ “ಮನೆ ಮಾರಾಟಕ್ಕಿದೆ” ಎಂದು ಬರೆದಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್‌ಗಂಜ್‌ ಗ್ರಾಮವು ಸುಮಾರು 100 ಮನೆಗಳನ್ನು ಹೊಂದಿದ್ದು, ಎರಡೂ ಸಮುದಾಯಗಳ ಸುಮಾರು 600 ಜನರು ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದಾರೆ. ಭಿನ್ನಾಭಿಪ್ರಾಯಗಳು ಸಾರ್ವಜನಿಕ ಪ್ರತಿಭಟನೆಯಾಗಿ ಬದಲಾದ ಕಾರಣ, ಈ ವಾರದ ಆರಂಭದಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ.

ಗ್ರಾಮಸ್ಥರಾದ ಕಮಲ್ ಕಿಶೋರ್ ಅವರು ಪ್ರತಿಕ್ರಿಯಿಸಿ, “ಕಳೆದ ಬಾರಿ ಅವರನ್ನು ತಡೆಯಲಾಗಿತ್ತು, ಆದರೆ ಈಗ ಮತ್ತೆ ಅದೇ ಮನೆಯಲ್ಲಿ ನಮಾಝ್ ಮಾಡುವುದನ್ನು ಆರಂಭಿಸಿದ್ದಾರೆ. ಆ ಮನೆ ಮದರಸಾ ಅಥವಾ ಮಸೀದಿಯಾಗಿ ಬದಲಾಗುವ ಮೊದಲೇ ಅದನ್ನು ಕೆಡವಬೇಕು ಎಂಬುದು ನಮ್ಮ ಆಗ್ರಹ” ಎಂದಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿ ಆರ್ಯ ತಿಳಿಸಿದ್ದಾರೆ. “ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸದ ಹೊರತು ನಾವು ಧಾರ್ಮಿಕ ಆಚರಣೆಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ವಸತಿ ಆಸ್ತಿಯನ್ನು ಸೂಕ್ತ ಪ್ರಕ್ರಿಯೆಯಿಲ್ಲದೆ ರಹಸ್ಯವಾಗಿ ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿ ಪರಿವರ್ತಿಸದಂತೆ ನೋಡುವುದಷ್ಟೇ ನಮ್ಮ ಕಾಳಜಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...