Homeಮುಖಪುಟಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ (ಫೆ.17) ವರದಿ ಮಾಡಿದೆ.

ನ್ಯಾಯಾಧೀಶರಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಫೆಬ್ರವರಿ 12ರಂದು ಇಬ್ಬರು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ ಕಾಯ್ದೆ 1971’ರ ಅಡಿಯಲ್ಲಿ ಕ್ರಮ ಜರುಗಿಸಿದೆ. ಇದೇ ವೇಳೆ ಅರ್ಜಿದಾರ ತಾರಿಕ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಿರುವ ಹೈಕೋರ್ಟ್, ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೋರಿದೆ ಎಂದು ವರದಿ ವಿವರಿಸಿದೆ.

ನಮ್ಮ ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಖಾಸಗಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದು ನಾಗರಿಕರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಜನವರಿ 16ರಂದು ರೇಷ್ಮಾ ಖಾನ್ ಎಂಬುವವರಿಗೆ ಸೇರಿದ ಖಾಲಿ ಮನೆಯೊಳಗೆ ನಮಾಝ್ ಮಾಡಿದ ಗುಂಪನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಪ್ರಾರ್ಥನೆಯು ಸಂಪೂರ್ಣವಾಗಿ ತನ್ನ ಖಾಸಗಿ ಆವರಣದೊಳಗೆ ನಡೆದಿದ್ದು, ಇದಕ್ಕೆ ತಾನು ಅನುಮತಿ ನೀಡಿರುವುದಾಗಿ ರೇಷ್ಮಾ ಖಾನ್ ತಿಳಿಸಿದ್ದರು.

ಪೊಲೀಸರ ಕ್ರಮದ ವಿರುದ್ದ ಈ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಂಬಂಧಿಸಿದ ‘ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಉತ್ತರ ಪ್ರದೇಶ ಸರ್ಕಾರ’ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಾರಿಖ್ ಖಾನ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ಹೇಳಿತ್ತು.

ಅರ್ಜಿದಾರ ತಾರಿಖ್ ಖಾನ್ ಪ್ರತಿಕ್ರಿಯಿಸಿ, “ಜನವರಿ 27ರಂದು ಹೊರಡಿಸಲಾದ ನ್ಯಾಯಾಲಯದ ಆದೇಶವು ಮತ್ತೊಂದು ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ನಾವೂ ಸಹ ಅಲ್ಪಸಂಖ್ಯಾತ ಸಮುದಾಯದವರೇ ಆಗಿರುವುದರಿಂದ, ಅದೇ ನಿಯಮ ನಮಗೂ ಅನ್ವಯಿಸಬೇಕು. ಇಲ್ಲಿಯವರೆಗೆ ನ್ಯಾಯಾಲಯದ ತಡೆಯಾಜ್ಞೆಯು ನಮಗೆ ರಕ್ಷಣೆ ನೀಡಿದೆ, ಆ ಕಾರಣಕ್ಕಾಗಿಯೇ ನಾವು ಮನೆಯಲ್ಲಿ ನಮ್ಮ ಪ್ರಾರ್ಥನೆಯನ್ನು ಪುನರಾರಂಭಿಸಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಹಿರಿಯ ಹೈಕೋರ್ಟ್ ವಕೀಲರಾದ ಎಸ್‌ಎಫ್‌ಎ ನಖ್ವಿ ಅವರು ನ್ಯಾಯಾಲಯದ ಆದೇಶ ಮತ್ತು ಹಿಂದೂ ನಿವಾಸಿಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ತೀರ್ಪು ಯಾವುದೇ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಈ ಆದೇಶವು ಸ್ವಯಂ ವಿವರಣಾತ್ಮಕವಾಗಿದೆ. ಒಂದು ಕಡೆ, ಖಾಸಗಿ ಜಾಗದಲ್ಲಿ ಪ್ರಾರ್ಥನೆ ನಡೆಸುವ ಅರ್ಜಿದಾರರ ಸಾಂವಿಧಾನಿಕ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಮತ್ತೊಂದು ಕಡೆ, ಈ ವಿಷಯದಲ್ಲಿ ಯಾವುದೇ ನಿಷೇಧಾಜ್ಞೆ ಹೊರಡಿಸಿಲ್ಲ ಎಂದು ಸ್ವತಃ ರಾಜ್ಯ ಸರ್ಕಾರವೇ ನ್ಯಾಯಾಲಯಕ್ಕೆ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಈ ಕ್ರಮವು ಕಾನೂನುಬಾಹಿರ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಆಡಳಿತಾತ್ಮಕ ಜವಾಬ್ದಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯೇ ಹೊರತು ಖಾಸಗಿ ವ್ಯಕ್ತಿಗಳದ್ದಲ್ಲ. ಒಂದು ವೇಳೆ ಪ್ರಾರ್ಥನೆ ನಡೆಸುವುದರ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೆ, ಸರ್ಕಾರವು ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು. ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುತ್ತಿರುವ ವ್ಯಕ್ತಿಗಳ ಬದಲಿಗೆ, ಕಾನೂನುಬದ್ಧ ಧಾರ್ಮಿಕ ಆಚರಣೆಯನ್ನು ವಿರೋಧಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಖ್ವಿ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ನಡುವೆ ಮೊಹಮ್ಮದ್‌ಗಂಜ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮನೆಯಲ್ಲಿ ಶುಕ್ರವಾರದ ನಮಾಝ್ ಪುನರಾರಂಭಿಸುವುದಕ್ಕೆ ಕೆಲವು ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾರದ ಪ್ರಾರ್ಥನಾ ಸಭೆಗಳನ್ನು ಬೇರೆ ಬೇರೆ ಖಾಸಗಿ ಮನೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿರುವ ಐದು ಕುಟುಂಬಗಳು, ಈ ವಸತಿ ಆಸ್ತಿಯು ಕಾಲಾನಂತರದಲ್ಲಿ ಶಾಶ್ವತ ಪ್ರಾರ್ಥನಾ ಮಂದಿರವಾಗಿ ಮಾರ್ಪಡಬಹುದು ಎಂಬ ಆತಂಕ ವ್ಯಕ್ತಪಡಿಸಿ ತಮ್ಮ ಮನೆಗಳ ಹೊರಗೋಡೆಗಳ ಮೇಲೆ “ಮನೆ ಮಾರಾಟಕ್ಕಿದೆ” ಎಂದು ಬರೆದಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್‌ಗಂಜ್‌ ಗ್ರಾಮವು ಸುಮಾರು 100 ಮನೆಗಳನ್ನು ಹೊಂದಿದ್ದು, ಎರಡೂ ಸಮುದಾಯಗಳ ಸುಮಾರು 600 ಜನರು ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದಾರೆ. ಭಿನ್ನಾಭಿಪ್ರಾಯಗಳು ಸಾರ್ವಜನಿಕ ಪ್ರತಿಭಟನೆಯಾಗಿ ಬದಲಾದ ಕಾರಣ, ಈ ವಾರದ ಆರಂಭದಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ.

ಗ್ರಾಮಸ್ಥರಾದ ಕಮಲ್ ಕಿಶೋರ್ ಅವರು ಪ್ರತಿಕ್ರಿಯಿಸಿ, “ಕಳೆದ ಬಾರಿ ಅವರನ್ನು ತಡೆಯಲಾಗಿತ್ತು, ಆದರೆ ಈಗ ಮತ್ತೆ ಅದೇ ಮನೆಯಲ್ಲಿ ನಮಾಝ್ ಮಾಡುವುದನ್ನು ಆರಂಭಿಸಿದ್ದಾರೆ. ಆ ಮನೆ ಮದರಸಾ ಅಥವಾ ಮಸೀದಿಯಾಗಿ ಬದಲಾಗುವ ಮೊದಲೇ ಅದನ್ನು ಕೆಡವಬೇಕು ಎಂಬುದು ನಮ್ಮ ಆಗ್ರಹ” ಎಂದಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿ ಆರ್ಯ ತಿಳಿಸಿದ್ದಾರೆ. “ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸದ ಹೊರತು ನಾವು ಧಾರ್ಮಿಕ ಆಚರಣೆಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ವಸತಿ ಆಸ್ತಿಯನ್ನು ಸೂಕ್ತ ಪ್ರಕ್ರಿಯೆಯಿಲ್ಲದೆ ರಹಸ್ಯವಾಗಿ ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿ ಪರಿವರ್ತಿಸದಂತೆ ನೋಡುವುದಷ್ಟೇ ನಮ್ಮ ಕಾಳಜಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...