Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...