Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...