Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...