Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...