Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...