Homeಮುಖಪುಟಕೃಷ್ಣ ಜನ್ಮಭೂಮಿ ಪ್ರಕರಣ: 15 ದಾವೆಗಳನ್ನು ಒಗ್ಗೂಡಿಸಿ ಆಲಿಸಲು ಮುಂದಾದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ ಪ್ರಕರಣ: 15 ದಾವೆಗಳನ್ನು ಒಗ್ಗೂಡಿಸಿ ಆಲಿಸಲು ಮುಂದಾದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಕೋರಿರುವ 15 ಅರ್ಜಿಗಳನ್ನು ಒಗ್ಗೂಡಿಸಿ ಆಲಿಸಲು ಅಲಹಾಬಾದ್ ಹೈಕೋರ್ಟ್‌ ಮುಂದಾಗಿದೆ.

ನಾಗರಿಕ ಪ್ರಕ್ರಿಯಾ ಸಂಹಿತೆ (ಸಿಪಿಸಿ) ಆದೇಶ 4-ಎ ಅಡಿಯಲ್ಲಿ ಹಿಂದೂ ಪಕ್ಷಕಾರರು (ವಾದಿ) ಈ ಕುರಿತು ಸಲ್ಲಿಸಿದ ಅರ್ಜಿಯ ನಂತರ ನ್ಯಾಯಮೂರ್ತಿ ಮಾಯಾಂಕ್ ಕುಮಾರ್ ಜೈನ್ ಮೇಲಿನ ಆದೇಶವನ್ನು ಹೊರಡಿಸಿದ್ದಾರೆ.

ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿರುವ ಅರ್ಜಿಗಳು ಮಥುರಾದ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದವು. ಮೇ 2023ರಲ್ಲಿ, ಹೈಕೋರ್ಟ್ ಈ ಮೊಕದ್ದಮೆಗಳನ್ನು ತನಗೆ ವರ್ಗಾಯಿಸಿಕೊಂಡಿತ್ತು. ಈ ಅರ್ಜಿಗಳನ್ನು ಒಗ್ಗೂಡಿಸಿ ಆಲಿಸಲು ಹಿಂದೂ ವಾದಿಯೊಬ್ಬರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಸುಮಾರು 18ರಷ್ಟು ಅರ್ಜಿಗಳು ಈಗಾಗಲೇ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಈ ಪೈಕಿ 12ರಷ್ಟು ಅರ್ಜಿಗಳು ಕತ್ರಾ ಕೇಶವ್ ದೇವಸ್ಥಾನಕ್ಕೆ ಹೊಂದಿಕೊಂಡಿರುವ 13.17 ಎಕರೆ ಜಾಗದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿವೆ.

ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅನುಮತಿ:

ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಡಿಸೆಂಬರ್ 14,2023ರಂದು ಅನುಮತಿ ನೀಡಿದೆ. ಇದಕ್ಕೆ ತಡೆ ನೀಡುವಂತೆ ಮಸೀದಿ ಪರ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...