Homeಮುಖಪುಟರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

ರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಸೋಮವಾರ (ಮೇ.5) ವಿಲೇವಾರಿ ಮಾಡಿದೆ.

ಕರ್ನಾಟಕ ಮೂಲದ ವಕೀಲ ಹಾಗೂ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್‌ ಮಸೂದಿ ಮತ್ತು ರಾಜೀವ್ ಸಿಂಗ್ ಅವರ ಪೀಠ, “ಈ ವಿಷಯವು ಎರಡು ದೇಶಗಳ ನಡುವಿನ ಸಂವಹನವಾಗಿದ್ದು, ಭಾರತ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು”ಎಂದು ನಿರ್ದೇಶಿಸಿದೆ.

ಅರ್ಜಿದಾರರ ದೂರನ್ನು ಪರಿಹರಿಸಲು ಕೇಂದ್ರ ಸರ್ಕಾರವು ಯಾವುದೇ ಕಾಲಮಿತಿಯನ್ನು ನೀಡಲು ಸಾಧ್ಯವಾಗದ ಕಾರಣ, ಅರ್ಜಿಯನ್ನು ಬಾಕಿ ಇಡಲು ಆಗುವುದಿಲ್ಲ. ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಅರ್ಜಿದಾರರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು. ರಾಹುಲ್ ಗಾಂಧಿಯ ಭಾರತೀಯ ಪೌರತ್ವವವನ್ನು ನಿರ್ಧರಿಸುವ ಹೊಣೆಗಾರಿಗೆ ಭಾರತ ಸರ್ಕಾರದ ಮೇಲಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆಗೆ ಒಳಪಡುತ್ತದೆ ಎಂದು ಪೀಠ ಹೇಳಿದೆ.

ರಾಹುಲ್ ಗಾಂಧಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ (ಯುಕೆ) ದ್ವಿಪೌರತ್ವವನ್ನು ಹೊಂದಿದ್ದು, ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಅನರ್ಹರು ಎಂದು ಅರ್ಜಿದಾರ ವಿಘ್ನೇಶ್ ಶಿಶಿರ್ ಹೇಳಿದ್ದರು.

ಏಪ್ರಿಲ್ 21ರಂದು ನಡೆದ ಅರ್ಜಿ ವಿಚಾರಣೆ ವೇಳೆ, ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಬಗ್ಗೆ ವಿವರಗಳನ್ನು ಕೋರಿ ಯುಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಿಳಿಸಿತ್ತು. ಅಲ್ಲಿನ ಸರ್ಕಾರದಿಂದ ಮಾಹಿತಿ ಪಡೆಯಲು ಕೇಂದ್ರ ಸರ್ಕಾರ ಹೆಚ್ಚುವರಿ ಸಮಯ ಕೋರಿದ ಹಿನ್ನೆಲೆ, ನ್ಯಾಯಾಲಯವ ಗೃಹ ಸಚಿವಾಲಯಕ್ಕೆ ಮೇ 5ರವರೆಗೆ ಕಾಲಾವಕಾಶ ನೀಡಿತ್ತು.

ರಾಹುಲ್ ಗಾಂಧಿಯವರ ದ್ವಿಪೌರತ್ವದ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಎರಡು ಬಾರಿ ದೂರುಗಳನ್ನು ನೀಡಿದ್ದರೂ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ಸುಬ್ರಮಣಿಯನ್ ಸ್ವಾಮಿ ದೂರು

2019ರಲ್ಲಿ, ಆಗಿನ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಮೇರೆಗೆ ಗೃಹ ಸಚಿವಾಲಯ ರಾಹುಲ್ ಗಾಂಧಿ ಅವರ ಪೌರತ್ವಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು.

2003ರಲ್ಲಿ ಯುನೈಟೆಡ್ ಕಿಂಗ್‌ಡಂನಲ್ಲಿ ಬ್ಯಾಕಾಪ್ಸ್ ಲಿಮಿಟೆಡ್ ಎಂಬ ಕಂಪನಿಯನ್ನು ನೋಂದಾಯಿಸಲಾಗಿದ್ದು, ರಾಹುಲ್ ಗಾಂಧಿಯನ್ನು ಆ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿ ಪಟ್ಟಿ ಮಾಡಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದರು.

ಕಂಪನಿಯ ಅಧಿಕೃತ ದಾಖಲೆಗಳಲ್ಲಿ ರಾಹುಲ್ ಗಾಂಧಿ ತನ್ನ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು.

ಗೃಹ ಸಚಿವಾಲಯದ ನೋಟಿಸ್‌ನಲ್ಲಿ, “ಅಕ್ಟೋಬರ್ 10, 2005ಮತ್ತು ಅಕ್ಟೋಬರ್ 31, 2006ರಂದು ಸಲ್ಲಿಸಲಾದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ, ನಿಮ್ಮ ಜನ್ಮ ದಿನಾಂಕವನ್ನು ಜೂನ್ 19, 1970 ಮತ್ತು ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದೀರಿ. ಫೆಬ್ರವರಿ 17, 2009ರಂದು ಕಂಪನಿಯ ವಿಸರ್ಜನೆ ಅರ್ಜಿಯಲ್ಲಿಯೂ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಉಲ್ಲೇಖಿಸಿದ್ದೀರಿ” ಎಂದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಹುಲ್ ಗಾಂಧಿಯನ್ನು ಕೇಳಿತ್ತು.

ಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ

ರಾಹುಲ್ ಗಾಂಧಿಯ ಭಾರತೀಯ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ.

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...