Homeಮುಖಪುಟವಿಹೆಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಕುರಿತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಭಾಷಣ

ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಕುರಿತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಭಾಷಣ

- Advertisement -
- Advertisement -

ನವದೆಹಲಿ: ಅಲಹಾಬಾದ್ ಹೈಕೋರ್ಟ್‌ನ ಇಬ್ಬರು ಹಾಲಿ ನ್ಯಾಯಾಧೀಶರು ಭಾನುವಾರ (ಡಿಸೆಂಬರ್ 8) ಹಿಂದುತ್ವ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಯಾಗ್‌ರಾಜ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರಲ್ಲಿ ಒಬ್ಬರು ಏಕರೂಪ ನಾಗರಿಕ ಸಂಹಿತೆಯ ಅಗತ್ಯತೆಯ ಕುರಿತು ಉಪನ್ಯಾಸ ನೀಡಿರುವುದು ವರದಿಯಾಗಿದೆ.

ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ವಿಎಚ್‌ಪಿಯ “ಕಾಶಿ ಪ್ರಾಂತ” (ವಾರಣಾಸಿ ವಲಯ) ಮತ್ತು ಹೈಕೋರ್ಟ್ ಘಟಕದ (ಅಲಹಾಬಾದ್) ಕಾನೂನು ಘಟಕ ಆಯೋಜಿಸಿದ್ದವು.

“ವಕ್ಫ್ ಬೋರ್ಡ್ ಕಾಯ್ದೆ” ಮತ್ತು “ಧಾರ್ಮಿಕ ಪರಿವರ್ತನೆ – ಕಾರಣಗಳು ಮತ್ತು ತಡೆಗಟ್ಟುವಿಕೆ” ವಿಷಯಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಗಿದೆ. 2026ರಲ್ಲಿ ನಿವೃತ್ತರಾಗಲಿರುವ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಯುಸಿಸಿಯಲ್ಲಿ “ಏಕರೂಪ ನಾಗರಿಕ ಸಂಹಿತೆ – ಒಂದು ಸಾಂವಿಧಾನಿಕ ಅಗತ್ಯ” ಎಂಬುದರ ಕುರಿತು ಉಪನ್ಯಾಸವನ್ನು ನೀಡಿದರು.

ಯುಸಿಸಿ ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಆಧರಿಸಿದೆ ಎಂದ ಅವರು, ಜಾತ್ಯತೀತತೆ ಭಾರತದಲ್ಲಿ ದೀರ್ಘ ಕಾಲದಿಂಲೂ ಚರ್ಚೆಯ ವಿಷಯವಾಗಿದೆ.

“ಯುಸಿಸಿಯ ಮುಖ್ಯ ಉದ್ದೇಶವೆಂದರೆ ವಿವಿಧ ಧರ್ಮಗಳು ಮತ್ತು ಸಮುದಾಯಗಳ ಆಧಾರದ ಮೇಲೆ ಅಸಮಾನ ಕಾನೂನು ವ್ಯವಸ್ಥೆಗಳನ್ನು ತೆಗೆದುಹಾಕುವ ಮೂಲಕ ಸಾಮಾಜಿಕ ಸಾಮರಸ್ಯ, ಲಿಂಗ ಸಮಾನತೆ ಮತ್ತು ಜಾತ್ಯತೀತತೆಯನ್ನು ಉತ್ತೇಜಿಸುವುದು. ಈ ಸಂಹಿತೆಯು ಸಮುದಾಯಗಳ ನಡುವೆ ಮಾತ್ರವಲ್ಲದೆ ಒಂದು ಸಮುದಾಯದೊಳಗೆ ಕಾನೂನುಗಳ ಏಕರೂಪತೆಯನ್ನು ಖಚಿತಪಡಿಸುವ ಗುರಿಯನ್ನು ಹೊಂದಿದೆ ಎಂದು ಯಾದವ್ ಹೇಳಿದ್ದಾರೆ.

ಇನ್ನೋರ್ವ ನ್ಯಾಯಾಧೀಶರಾದ ಜಸ್ಟಿಸ್ ದಿನೇಶ್ ಪಾಠಕ್ ಅವರು ಸಮಾರಂಭದಲ್ಲಿ “ದೀಪ ಬೆಳಗಿಸಿ” ಮತ್ತು “ಆಶೀರ್ವಾದ” ನೀಡಲು ನಿರ್ಧರಿಸಲಾಗಿತ್ತು. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ ಎನ್ನಲಾಗಿದೆ.

ಜಾನ್‌ಪುರ್, ಸುಲ್ತಾನ್‌ಪುರ, ಪ್ರತಾಪ್‌ಗಢ, ಅಮೇಥಿ, ಪ್ರಯಾಗ್‌ರಾಜ್, ಕೌಶಂಬಿ, ಭದೋಹಿ, ಮಿರ್ಜಾಪುರ, ಚಂದೌಲಿ, ಸೋನ್‌ಭದ್ರ, ಘಾಜಿಪುರ ಮತ್ತು ವಾರಣಾಸಿಯಿಂದ ವಿಎಚ್‌ಪಿಯ ಕಾಶಿ ಪ್ರಾಂತ್ ಕಾನೂನು ಘಟಕದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಸರ್ಕಾರಿ ವಕೀಲ ಎ.ಕೆ.ಸಾಂಡ್ ಮತ್ತು  ಅಲಹಾಬಾದ್‌ನ ಹೈಕೋರ್ಟ್ ಬಾರ್ ಅಸೋಸಿಯೇಶನ್‌ನ ಅಧ್ಯಕ್ಷ  ಅನಿಲ್ ತಿವಾರಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಇದು ಆಯ್ದ ವ್ಯಕ್ತಿಗಳ ಸಭೆ  ಎಂದು ವಿಎಚ್‌ಪಿ ಮೂಲಗಳು ತಿಳಿಸಿವೆ.

ನ್ಯಾಯಾಧೀಶ ಯಾದವ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಈ ಹಿಂದೆ ಜನಮನವನ್ನು ಗಳಿಸಿದ್ದು, ನಿರ್ದಿಷ್ಟವಾಗಿ ಹಿಂದೂ ಧರ್ಮ ಮತ್ತು ಪುರಾಣದ ಅಂಶಗಳನ್ನು ಉಲ್ಲೇಖಿಸುವವರಾಗಿದ್ದಾರೆ.

2021ರಲ್ಲಿ, ಸಂಭಾಲ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ಸಹಚರರೊಂದಿಗೆ ಹಸುವನ್ನು ಕದ್ದು, ಹತ್ಯೆ ಮಾಡಿದ ಆರೋಪಕ್ಕಾಗಿ ಜಾಮೀನು ನೀಡಲು ನಿರಾಕರಿಸಿದ್ದರು.  ಯಾದವ್ ಅವರು ಹಿಂದೂಗಳ ಮೂಲಭೂತ ಹಕ್ಕಾಗಿ ಗೋವನ್ನು “ರಾಷ್ಟ್ರೀಯ ಪ್ರಾಣಿ” ಎಂದು ಮತ್ತು ಗೋರಕ್ಷ (ಗೋ ರಕ್ಷಣೆ) ಅನ್ನು ಘೋಷಿಸಬೇಕೆಂದು ಹೇಳಿದ್ದರು.

ಪೌರಾಣಿಕ ಕಥೆಗಳೊಂದಿಗೆ ಹಿಂದಿಯಲ್ಲಿ ನ್ಯಾಯಮೂರ್ತಿ ಯಾದವ್ ಅವರು ಹಿಂದಿಯಲ್ಲಿ 12 ಪುಟಗಳಲ್ಲಿ ಬರೆದ ತನ್ನ ಆದೇಶದಲ್ಲಿ ಹಸು ಉಸಿರಾಟದಿಂದ ಆಮ್ಲಜನಕವನ್ನು ಹೊರಹಾಕುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಅಭಿಪ್ರಾಯಿಸಿದ್ದಾರೆ ಎಂದು ತೀರ್ಪು ನೀಡಿದ್ದರು.

ಗೋಹತ್ಯೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಸತ್ತು ಕಾನೂನನ್ನು ಜಾರಿಗೆ ತರಬೇಕೆಂದು ಯಾದವ್ ಇದೇ ಆದೇಶದಲ್ಲಿ ವಾದಿಸಿದ್ದರು.  “ದೇಶದ ನಂಬಿಕೆ ಮತ್ತು ಸಂಸ್ಕೃತಿಗೆ ಹಾನಿಯಾದಾಗ, ದೇಶವು ದುರ್ಬಲಗೊಳ್ಳುತ್ತದೆ” ಎಂದು ಅವರು  ತೀರ್ಪಿತ್ತಿದ್ದರು.

ಅದೇ ವರ್ಷ, ಅಕ್ಟೋಬರ್‌ನಲ್ಲಿ, ನ್ಯಾಯಮೂರ್ತಿ ಯಾದವ್ ಅವರು ಆದೇಶವೊಂದರಲ್ಲಿ ಮತ್ತೊಂದು ಭಾವನಾತ್ಮಕ ತೀರ್ಪು ನೀಡಿದ್ದರು.  ಹಿಂದೂ ದೇವತೆಗಳಾದ ರಾಮ ಮತ್ತು ಕೃಷ್ಣ ಹಾಗೂ ಹಿಂದೂ ಪುರಾಣ ಗ್ರಂಥಗಳಾದ ರಾಮಾಯಣ ಮತ್ತುಭಗವದ್ಗಿತೆ ಮತ್ತು ಇವುಗಳ ಕರ್ತೃಗಳಾದ ವಾಲ್ಮೀಕಿ ಮತ್ತು ವೇದವ್ಯಾಸ್‌ ರಿಗೆ ಸಂಸತ್ತಿನಲ್ಲಿ ಕಾಯ್ದೆ ಮೂಲಕ ರಾಷ್ಟ್ರೀಯ ಗೌರವವನ್ನು ನೀಡಲಾಗುವುದು ಎಂದು ಹೇಳಿದ್ದರು.

ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ ಮತ್ತು ವೇದವ್ಯಾಸರು ದೇಶದ “ಸಂಸ್ಕೃತಿ ಮತ್ತು ಪರಂಪರೆಯ” ಭಾಗವಾಗಿದ್ದಾರೆ. ರಾಮ, ಕೃಷ್ಣರಿಗೆ ಅವಮಾನಿಸಿದ ಆರೋಪದ ಮೇಲೆ ಹಿಂದೂ ದಲಿತ ವ್ಯಕ್ತಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಯಾದವ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಹಿಂದೂ ಸಮಾಜದಲ್ಲಿ ಮತ್ತು ವಿಶ್ವ ಕಲ್ಯಾಣಕ್ಕಾಗಿ ಈ ದೇವತೆಗಳು ಮತ್ತು ಪೌರಾಣಿಕ ಮಹಾಕಾವ್ಯಗಳು ನಿರ್ವಹಿಸಿದ ಪಾತ್ರವನ್ನು ಯಾದವ್ ಶ್ಲಾಘಿಸಿದ್ದು,  ಈ ಅಂಶಗಳನ್ನು ದೇಶದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಕಲಿಕಾ ವಿಷಯವನ್ನಾಗಿ ಮಾಡಬೇಕು ಎಂದು ಅವರು ಉಲ್ಲೇಖಿಸಿದ್ದರು ಮತ್ತು ಶಿಕ್ಷಣದ ಮೂಲಕ ಮಾತ್ರ ಒಬ್ಬ ವ್ಯಕ್ತಿಯು ಸುಸಂಸ್ಕೃತನಾಗುತ್ತಾನೆ ಮತ್ತು ಅವನು ಜೀವನ ಮೌಲ್ಯಗಳ ಬಗ್ಗೆ ಅರಿವು ಹೊಂದುತ್ತಾನೆ ಎಂದು ಯಾದವ್ ಹೇಳಿದರು.

“ರಾಮ ಮತ್ತು ಕೃಷ್ಣರು ಈ ಭಾರತದ ನೆಲದಲ್ಲಿ ಜನಿಸಿದ್ದಾರೆ ಮತ್ತು ಇಲ್ಲಿಯ ಜನರ ಕಲ್ಯಾಣದ ಬಗ್ಗೆ ಚಿಂತಿಸಿದ್ದರು ಮತ್ತು ತಮ್ಮ ಜೀವನದುದ್ದಕ್ಕೂ ಜೀವರಾಶಿಗಳ ಕಲ್ಯಾಣಕ್ಕಾಗಿ ನಿಸ್ವಾರ್ಥವಾಗಿ ಕೆಲಸ ಮಾಡಿದ್ದರು. ಇದರಿಂದ ಲೋಕಕಲ್ಯಾಣವಾಯಿತು. ವಿಶ್ವದ ಅನೇಕ ದೇಶಗಳ ಜನತೆ ರಾಮ ಮತ್ತು ಕೃಷ್ಣ ಮತ್ತು ಅವರ ಕಾರ್ಯಗಳು ಮತ್ತು ಆಲೋಚನೆಗಳನ್ನು ನಂಬಿದ್ದಾರೆ ಎಂದು ನ್ಯಾಯಾಧೀಶರು ಅಕ್ಟೋಬರ್ 2021ರಲ್ಲಿ ಹೇಳಿದರು.

2021ರ ಡಿಸೆಂಬರ್‌ನಲ್ಲಿ ನ್ಯಾಯಮೂರ್ತಿ ಯಾದವ್ ಅವರು, ರಾಜಕೀಯ ಪಕ್ಷಗಳ ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ತಕ್ಷಣವೇ ನಿಷೇಧಿಸುವಂತೆ ಮತ್ತು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳನ್ನು ಕೋವಿಡ್-19 ರ  ರೂಪಾಂತರದ ಪ್ರಕರಣಗಳ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ  ಮುಂದೂಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗವನ್ನು ವಿನಂತಿಸಿದ್ದರು.

ಪ್ರಯಾಗರಾಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಎಚ್‌ಪಿಯ ಕಾನೂನು ಘಟಕದ ರಾಷ್ಟ್ರೀಯ ಸಹ ಸಂಚಾಲಕ ಅಭಿಷೇಕ್ ಅತ್ರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಭಾಷಣ ಮಾಡಿದರು.

ಬಾಂಗ್ಲಾದೇಶದಲ್ಲಿ “ಎರಡನೇ ಕಾಶ್ಮೀರ” ವನ್ನು ಕಾಣಬಹುದು ಎಂದು ಹೇಳಿದ ಅತ್ರೇ, ಅಲ್ಲಿನ ಇತ್ತೀಚಿನ ರಾಜಕೀಯ ಕ್ರಾಂತಿಯ ನಂತರ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳನ್ನು ಗುರಿಯಾಗಿಸಲಾಗಿದೆ ಎಂದು ಉಲ್ಲೇಖಿಸಿದರು.

ನಮ್ಮ ಗುರುತನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಅತ್ರೆ ಹೇಳಿದರು.

ಇದನ್ನೂಓದಿ….‘ಎಂವಿಎ’ ಮೈತ್ರಿಯಿಂದ ಹೊರಬಂದ ಸಮಾಜವಾದಿ ಪಾರ್ಟಿಯನ್ನು ‘ಬಿಜೆಪಿಯ ಬಿ ಟೀಮ್’ ಎಂದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...