Homeಮುಖಪುಟಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಮೂರು ವಾರಗಳಲ್ಲಿ ಪರೀಕ್ಷಿಸಿ ನಿರ್ಧರಿಸುವಂತೆ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಶನಿವಾರ ತಡೆ ನೀಡಿದೆ.

ಹೈಕೋರ್ಟ್‌ನ ಲಕ್ನೋ ಪೀಠ ನೀಡಿದ ಆದೇಶವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಜ್ಯೋತಿಷ್ಯವನ್ನು ತರುವ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶವು ಸಂಪೂರ್ಣವಾಗಿ ಸಂದರ್ಭವನ್ನು ಮೀರಿ ನಿಂತಿದೆ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿಕ್ರಿಯಿಸಿ, ಈ ಆದೇಶ ಗೊಂದಲಕ್ಕೀಡಾಗುವಂತೆ ಇದೆ. ಅದನ್ನು ತಡೆಹಿಡಿಯಬಹುದು ಎಂದು ಹೇಳಿದ್ದಾರೆ.

ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆರೋಪಿಯು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, “ಈ ಮಹಿಳೆಗೆ ಕುಜದೋಷವಿದೆ. ಹೀಗಾಗಿ ವಿವಾಹವಾಗಲು ಸಾಧ್ಯವಿಲ್ಲ” ಎಂದು ವಾದಿಸಿದ್ದಾರೆ.

ಕುಜದೋಷವೆಂಬ ಮೌಢ್ಯ

ಹಿಂದೂ ಜ್ಯೋತಿಷ್ಯದ ಪ್ರಕಾರ, ‘ಮಂಗಳಿ/ಮಾಂಗಲಿಕ’ ಮಂಗಳನ ಪ್ರಭಾವದ ಅಡಿಯಲ್ಲಿ ಜನಿಸಿದ ವ್ಯಕ್ತಿಯಾಗಿರುತ್ತಾರೆ’. ಅಂತಹ ವ್ಯಕ್ತಿಗಳನ್ನು ಮದುವೆಯಾದರೆ ಆಪತ್ತು. ಮದುವೆಯಾದವರು ತೊಂದರೆಗೆ ಸಿಲುಕುತ್ತಾರೆ ಎಂಬ ಮೌಢ್ಯ ಚಾಲ್ತಿಯಲ್ಲಿದೆ.

“ಕುಜ ದೋಷವನ್ನು ಅಂಗಾರಕ ದೋಷ ಮತ್ತು ಮಾಂಗಲ್ಯ ದೋಷ ಎಂದೂ ಕರೆಯುತ್ತಾರೆ. ಅಂದರೆ ಮಾಂಗಲ್ಯಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ಮದುವೆಗೂ ಮುನ್ನ ವಧು-ವರರ ಜಾತಕ ನೋಡಿ ದೋಷ ಇದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸಬೇಕು. ಯಾವುದೇ ಜಾತಕದಲ್ಲಿ ಮಂಗಳ 1ನೇ ಸ್ಥಾನದಲ್ಲಿದ್ದಾಗ ಪ್ರಧಾನ ಕುಜ ದೋಷ ಉಂಟಾಗುತ್ತದೆ” ಎಂಬ ಮೌಢ್ಯ ಬೆಳೆದು ನಿಂತಿದೆ.

ಏನಿದು ಆದೇಶ

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವಕೀಲರಿಗೆ ಈ ಆದೇಶವನ್ನು ನೀಡಿದ್ದರು. ತಮ್ಮ ಕುಂಡಲಿಯನ್ನು ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಿ, ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ಅತ್ಯಾಚಾರ ಆರೋಪಿ ಪರ ವಕೀಲರು ವಾದ ಮಂಡಿಸಿದ್ದು, “ಯುವತಿಯು ಕುಜದೋಷ ಹೊಂದಿದ್ದಾರೆ. ಆದ್ದರಿಂದ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಲು ಸಾಧ್ಯವಿಲ್ಲ” ಎಂದಿದ್ದರು.

ಮತ್ತೊಂದೆಡೆ ಸಂತ್ರಸ್ತೆಯ ಪರ ವಕೀಲರಾದ ವಿವೇಕ್ ಕುಮಾರ್ ಸಿಂಗ್, “ಯುವತಿಯ ಜಾತಕದಲ್ಲಿ ಕುಜ ದೋಷ ಇಲ್ಲ. ಆಕೆ ‘ಮಾಂಗಲಿಕ’ ಅಲ್ಲ” ಎಂದು ವಾದಿಸಿದ್ದರು.

“ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರು ಹುಡುಗಿ ಮಂಗಳಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು. ಸಂಬಂಧಪಟ್ಟವರು ಹತ್ತು ದಿನಗಳಲ್ಲಿ ಲಕ್ನೋ ವಿವಿಯ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರ ಮುಂದೆ ಕುಂಡಲಿಯನ್ನು ಹಾಜರುಪಡಿಸಬೇಕು. ಮೂರು ವಾರಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ಆದೇಶದಲ್ಲಿ ಸೂಚಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...