Homeಮುಖಪುಟಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಮೂರು ವಾರಗಳಲ್ಲಿ ಪರೀಕ್ಷಿಸಿ ನಿರ್ಧರಿಸುವಂತೆ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಶನಿವಾರ ತಡೆ ನೀಡಿದೆ.

ಹೈಕೋರ್ಟ್‌ನ ಲಕ್ನೋ ಪೀಠ ನೀಡಿದ ಆದೇಶವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಜ್ಯೋತಿಷ್ಯವನ್ನು ತರುವ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶವು ಸಂಪೂರ್ಣವಾಗಿ ಸಂದರ್ಭವನ್ನು ಮೀರಿ ನಿಂತಿದೆ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿಕ್ರಿಯಿಸಿ, ಈ ಆದೇಶ ಗೊಂದಲಕ್ಕೀಡಾಗುವಂತೆ ಇದೆ. ಅದನ್ನು ತಡೆಹಿಡಿಯಬಹುದು ಎಂದು ಹೇಳಿದ್ದಾರೆ.

ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆರೋಪಿಯು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, “ಈ ಮಹಿಳೆಗೆ ಕುಜದೋಷವಿದೆ. ಹೀಗಾಗಿ ವಿವಾಹವಾಗಲು ಸಾಧ್ಯವಿಲ್ಲ” ಎಂದು ವಾದಿಸಿದ್ದಾರೆ.

ಕುಜದೋಷವೆಂಬ ಮೌಢ್ಯ

ಹಿಂದೂ ಜ್ಯೋತಿಷ್ಯದ ಪ್ರಕಾರ, ‘ಮಂಗಳಿ/ಮಾಂಗಲಿಕ’ ಮಂಗಳನ ಪ್ರಭಾವದ ಅಡಿಯಲ್ಲಿ ಜನಿಸಿದ ವ್ಯಕ್ತಿಯಾಗಿರುತ್ತಾರೆ’. ಅಂತಹ ವ್ಯಕ್ತಿಗಳನ್ನು ಮದುವೆಯಾದರೆ ಆಪತ್ತು. ಮದುವೆಯಾದವರು ತೊಂದರೆಗೆ ಸಿಲುಕುತ್ತಾರೆ ಎಂಬ ಮೌಢ್ಯ ಚಾಲ್ತಿಯಲ್ಲಿದೆ.

“ಕುಜ ದೋಷವನ್ನು ಅಂಗಾರಕ ದೋಷ ಮತ್ತು ಮಾಂಗಲ್ಯ ದೋಷ ಎಂದೂ ಕರೆಯುತ್ತಾರೆ. ಅಂದರೆ ಮಾಂಗಲ್ಯಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ಮದುವೆಗೂ ಮುನ್ನ ವಧು-ವರರ ಜಾತಕ ನೋಡಿ ದೋಷ ಇದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸಬೇಕು. ಯಾವುದೇ ಜಾತಕದಲ್ಲಿ ಮಂಗಳ 1ನೇ ಸ್ಥಾನದಲ್ಲಿದ್ದಾಗ ಪ್ರಧಾನ ಕುಜ ದೋಷ ಉಂಟಾಗುತ್ತದೆ” ಎಂಬ ಮೌಢ್ಯ ಬೆಳೆದು ನಿಂತಿದೆ.

ಏನಿದು ಆದೇಶ

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವಕೀಲರಿಗೆ ಈ ಆದೇಶವನ್ನು ನೀಡಿದ್ದರು. ತಮ್ಮ ಕುಂಡಲಿಯನ್ನು ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಿ, ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ಅತ್ಯಾಚಾರ ಆರೋಪಿ ಪರ ವಕೀಲರು ವಾದ ಮಂಡಿಸಿದ್ದು, “ಯುವತಿಯು ಕುಜದೋಷ ಹೊಂದಿದ್ದಾರೆ. ಆದ್ದರಿಂದ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಲು ಸಾಧ್ಯವಿಲ್ಲ” ಎಂದಿದ್ದರು.

ಮತ್ತೊಂದೆಡೆ ಸಂತ್ರಸ್ತೆಯ ಪರ ವಕೀಲರಾದ ವಿವೇಕ್ ಕುಮಾರ್ ಸಿಂಗ್, “ಯುವತಿಯ ಜಾತಕದಲ್ಲಿ ಕುಜ ದೋಷ ಇಲ್ಲ. ಆಕೆ ‘ಮಾಂಗಲಿಕ’ ಅಲ್ಲ” ಎಂದು ವಾದಿಸಿದ್ದರು.

“ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರು ಹುಡುಗಿ ಮಂಗಳಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು. ಸಂಬಂಧಪಟ್ಟವರು ಹತ್ತು ದಿನಗಳಲ್ಲಿ ಲಕ್ನೋ ವಿವಿಯ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರ ಮುಂದೆ ಕುಂಡಲಿಯನ್ನು ಹಾಜರುಪಡಿಸಬೇಕು. ಮೂರು ವಾರಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ಆದೇಶದಲ್ಲಿ ಸೂಚಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...