Homeಮುಖಪುಟಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅತ್ಯಾಚಾರ ಸಂತ್ರಸ್ತೆಯ ‘ಕುಜದೋಷ’ ಪರೀಕ್ಷಿಸಲು ಅಲಹಾಬಾದ್ ಹೈಕೋರ್ಟ್ ಆದೇಶ; ಸುಪ್ರೀಂ ಕೋರ್ಟ್ ತಡೆಯಾಜ್ಞೆ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಮೂರು ವಾರಗಳಲ್ಲಿ ಪರೀಕ್ಷಿಸಿ ನಿರ್ಧರಿಸುವಂತೆ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಶನಿವಾರ ತಡೆ ನೀಡಿದೆ.

ಹೈಕೋರ್ಟ್‌ನ ಲಕ್ನೋ ಪೀಠ ನೀಡಿದ ಆದೇಶವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಜ್ಯೋತಿಷ್ಯವನ್ನು ತರುವ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶವು ಸಂಪೂರ್ಣವಾಗಿ ಸಂದರ್ಭವನ್ನು ಮೀರಿ ನಿಂತಿದೆ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿಕ್ರಿಯಿಸಿ, ಈ ಆದೇಶ ಗೊಂದಲಕ್ಕೀಡಾಗುವಂತೆ ಇದೆ. ಅದನ್ನು ತಡೆಹಿಡಿಯಬಹುದು ಎಂದು ಹೇಳಿದ್ದಾರೆ.

ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆರೋಪಿಯು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, “ಈ ಮಹಿಳೆಗೆ ಕುಜದೋಷವಿದೆ. ಹೀಗಾಗಿ ವಿವಾಹವಾಗಲು ಸಾಧ್ಯವಿಲ್ಲ” ಎಂದು ವಾದಿಸಿದ್ದಾರೆ.

ಕುಜದೋಷವೆಂಬ ಮೌಢ್ಯ

ಹಿಂದೂ ಜ್ಯೋತಿಷ್ಯದ ಪ್ರಕಾರ, ‘ಮಂಗಳಿ/ಮಾಂಗಲಿಕ’ ಮಂಗಳನ ಪ್ರಭಾವದ ಅಡಿಯಲ್ಲಿ ಜನಿಸಿದ ವ್ಯಕ್ತಿಯಾಗಿರುತ್ತಾರೆ’. ಅಂತಹ ವ್ಯಕ್ತಿಗಳನ್ನು ಮದುವೆಯಾದರೆ ಆಪತ್ತು. ಮದುವೆಯಾದವರು ತೊಂದರೆಗೆ ಸಿಲುಕುತ್ತಾರೆ ಎಂಬ ಮೌಢ್ಯ ಚಾಲ್ತಿಯಲ್ಲಿದೆ.

“ಕುಜ ದೋಷವನ್ನು ಅಂಗಾರಕ ದೋಷ ಮತ್ತು ಮಾಂಗಲ್ಯ ದೋಷ ಎಂದೂ ಕರೆಯುತ್ತಾರೆ. ಅಂದರೆ ಮಾಂಗಲ್ಯಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ಮದುವೆಗೂ ಮುನ್ನ ವಧು-ವರರ ಜಾತಕ ನೋಡಿ ದೋಷ ಇದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸಬೇಕು. ಯಾವುದೇ ಜಾತಕದಲ್ಲಿ ಮಂಗಳ 1ನೇ ಸ್ಥಾನದಲ್ಲಿದ್ದಾಗ ಪ್ರಧಾನ ಕುಜ ದೋಷ ಉಂಟಾಗುತ್ತದೆ” ಎಂಬ ಮೌಢ್ಯ ಬೆಳೆದು ನಿಂತಿದೆ.

ಏನಿದು ಆದೇಶ

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವಕೀಲರಿಗೆ ಈ ಆದೇಶವನ್ನು ನೀಡಿದ್ದರು. ತಮ್ಮ ಕುಂಡಲಿಯನ್ನು ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಿ, ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ಅತ್ಯಾಚಾರ ಆರೋಪಿ ಪರ ವಕೀಲರು ವಾದ ಮಂಡಿಸಿದ್ದು, “ಯುವತಿಯು ಕುಜದೋಷ ಹೊಂದಿದ್ದಾರೆ. ಆದ್ದರಿಂದ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಲು ಸಾಧ್ಯವಿಲ್ಲ” ಎಂದಿದ್ದರು.

ಮತ್ತೊಂದೆಡೆ ಸಂತ್ರಸ್ತೆಯ ಪರ ವಕೀಲರಾದ ವಿವೇಕ್ ಕುಮಾರ್ ಸಿಂಗ್, “ಯುವತಿಯ ಜಾತಕದಲ್ಲಿ ಕುಜ ದೋಷ ಇಲ್ಲ. ಆಕೆ ‘ಮಾಂಗಲಿಕ’ ಅಲ್ಲ” ಎಂದು ವಾದಿಸಿದ್ದರು.

“ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರು ಹುಡುಗಿ ಮಂಗಳಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು. ಸಂಬಂಧಪಟ್ಟವರು ಹತ್ತು ದಿನಗಳಲ್ಲಿ ಲಕ್ನೋ ವಿವಿಯ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರ ಮುಂದೆ ಕುಂಡಲಿಯನ್ನು ಹಾಜರುಪಡಿಸಬೇಕು. ಮೂರು ವಾರಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ಆದೇಶದಲ್ಲಿ ಸೂಚಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...