Homeಮುಖಪುಟಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್...

ಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಲಕ್ನೋ: ಭಾರತೀಯ ಸೇನೆಯ ಕುರಿತು ಹೇಳಿಕೆಗಳಿಗಾಗಿ ತಮ್ಮ ವಿರುದ್ಧದ ಸಮನ್ಸ್ ರದ್ದುಗೊಳಿಸುವಂತೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ವಾಕ್ ಸ್ವಾತಂತ್ರ್ಯದ ಹಕ್ಕು ಸಶಸ್ತ್ರ ಪಡೆಗಳ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡುವುದಕ್ಕೆ ವಿಸ್ತರಿಸುವುದಿಲ್ಲ ಎಂದು ಅದು ಹೇಳಿದೆ.

ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದೆ. ಮಾನನಷ್ಟ ಪ್ರಕರಣ ಮತ್ತು ಫೆಬ್ರವರಿ 2025ರಲ್ಲಿ ಲಕ್ನೋದ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ನಿಸ್ಸಂದೇಹವಾಗಿ, ಭಾರತದ ಸಂವಿಧಾನದ ವಿಧಿ 19(1)(ಎ) ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. [ಆದರೆ] ಈ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಮತ್ತು ಯಾವುದೇ ವ್ಯಕ್ತಿಗೆ ಮಾನನಷ್ಟಕರ ಅಥವಾ ಭಾರತೀಯ ಸೇನೆಗೆ ಮಾನನಷ್ಟಕರವಾದ ಹೇಳಿಕೆಗಳನ್ನು ನೀಡುವ ಸ್ವಾತಂತ್ರ್ಯವನ್ನು ಇದು ಒಳಗೊಂಡಿಲ್ಲ” ಎಂದು ಹೇಳಿದರು.

ಗಡಿ ರಸ್ತೆಗಳ ಸಂಘಟನೆಯ (BRO) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರು ಸಲ್ಲಿಸಿರುವ ಮತ್ತು ಪ್ರಸ್ತುತ ಲಕ್ನೋದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರು 2022ರ ಡಿಸೆಂಬರ್ 16ರಂದು ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಗಳು ಎಂದು ಹೇಳಲಾಗಿದೆ.

2022ರ ಡಿಸೆಂಬರ್ 9ರಂದು ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಗಾಂಧಿಯವರ ಆಕ್ಷೇಪಾರ್ಹ ಹೇಳಿಕೆಗಳು ಭಾರತೀಯ ಸೇನೆಯ ಮಾನಹಾನಿಯನ್ನುಂಟುಮಾಡಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆ ಸಮಯದಲ್ಲಿ ಗಾಂಧಿಯವರು, “ಕೆಲವು ಜನರು ಭಾರತ್ ಜೋಡೋ ಯಾತ್ರೆ ಕುರಿತು ಪ್ರಶ್ನಿಸುತ್ತಾರೆ. ಆದರೆ ಚೀನಾ ಭಾರತದ 2,000 ಚದರ ಕಿ.ಮೀ. ಪ್ರದೇಶವನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿದ್ದರ ಕುರಿತು ಅವರು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ. ಹಾಗೆಯೇ ಭಾರತೀಯ ಮಾಧ್ಯಮಗಳು ಇದರ ಬಗ್ಗೆ ಕೇಳುವುದಿಲ್ಲ. ಇದು ನಿಜವಲ್ಲವೇ? ರಾಷ್ಟ್ರವು ಇದನ್ನೆಲ್ಲಾ ನೋಡುತ್ತಿದೆ. ಜನರಿಗೆ ತಿಳಿದಿಲ್ಲ ಎಂದು ನಟಿಸಬೇಡಿ…” ಎಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಹುಲ್ ಗಾಂಧಿ ಅವರು ಲಕ್ನೋ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇದು ಪ್ರಾಥಮಿಕವಾಗಿ ಅವರ ಹೇಳಿಕೆಗಳು ಭಾರತೀಯ ಸೇನೆ ಮತ್ತು ಅವರ ಕುಟುಂಬಗಳ ಸ್ಥೈರ್ಯ ಕುಗ್ಗಿಸುವಂತೆ ಕಂಡುಬಂದಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸೇನಾ ಅಧಿಕಾರಿಯನ್ನಾಗಲಿ ಅಥವಾ ವೈಯಕ್ತಿಕವಾಗಿ ಯಾರನ್ನು ಮಾನಹಾನಿಗೊಳಿಸಿಲ್ಲ ಎಂದು ರಾಹುಲ್ ವಾದಿಸಿದರೂ, ಹೈಕೋರ್ಟ್ ಇದನ್ನು ತಿರಸ್ಕರಿಸಿತು. ಸೆಕ್ಷನ್ 199(1) Cr.P.C. ಅಡಿಯಲ್ಲಿ ಪರೋಕ್ಷವಾಗಿ ಪ್ರಭಾವಿತರಾದವರನ್ನು ಸಹ “ಸಂತ್ರಸ್ತ ವ್ಯಕ್ತಿಗಳು” ಎಂದು ಪರಿಗಣಿಸಬಹುದು ಎಂದು ಉಲ್ಲೇಖಿಸಿತು.

ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಈ ಪ್ರಾಥಮಿಕ ಹಂತದಲ್ಲಿ ಸ್ಪರ್ಧಾತ್ಮಕ ಹಕ್ಕುಗಳನ್ನು ಮೌಲ್ಯಮಾಪನ ಮಾಡುವ ಅಗತ್ಯವಿಲ್ಲ ಎಂದು ಹೇಳಿತು.

ಎಲ್ಲಾ ಸಂಬಂಧಿತ ಸಂಗತಿಗಳನ್ನು ಪರಿಗಣಿಸಿ ಮತ್ತು ಪ್ರಾಥಮಿಕವಾಗು ಮೇಲ್ನೋಟಕ್ಕೆ ಪ್ರಕರಣ ಅಸ್ತಿತ್ವದಲ್ಲಿದೆ ಎಂಬ ಅಭಿಪ್ರಾಯವನ್ನು ರೂಪಿಸಿದ ನಂತರ “ವಿಚಾರಣಾ ನ್ಯಾಯಾಲಯವು ಸೆಕ್ಷನ್ 500 ಐಪಿಸಿ ಅಡಿಯಲ್ಲಿ ಅಪರಾಧಕ್ಕಾಗಿ ವಿಚಾರಣೆಯನ್ನು ಎದುರಿಸಲು ಅರ್ಜಿದಾರರಿಗೆ ಸಮನ್ಸ್ ಹೊರಡಿಸುವ ನಿರ್ಧಾರಕ್ಕೆ ಸರಿಯಾಗಿ ಬಂದಿದೆ” ಎಂದು ಅಭಿಪ್ರಾಯಿಸಿ, ಗಾಂಧಿಯವರಿಗೆ ಸಮನ್ಸ್ ನೀಡುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಅದು ಎತ್ತಿಹಿಡಿದಿದೆ.

2025ರ ಫೆಬ್ರವರಿ 11ರಂದು ಆಕ್ಷೇಪಾರ್ಹ ಸಮನ್ಸ್ ಆದೇಶವು … ಹಸ್ತಕ್ಷೇಪಕ್ಕೆ ಕಾರಣವಾಗುವ ಯಾವುದೇ ಕಾನೂನುಬಾಹಿರತೆಯಿಂದ ಕೂಡಿಲ್ಲ ಮತ್ತು ಸೆಕ್ಷನ್ 482 ಸಿಆರ್.ಪಿ.ಸಿ. ಅಡಿಯಲ್ಲಿ ಅರ್ಜಿಯು ಅರ್ಹತೆಯನ್ನು ಹೊಂದಿಲ್ಲ ಮತ್ತು ಅದನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿ ಅರ್ಜಿಯನ್ನು ವಜಾಗೊಳಿಸಿತು.

ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ, ಅವರು ಇನ್ನು ಮುಂದೆ ಯಾವುದೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದಂತೆ ಸ್ಪಷ್ಟವಾಗಿ ನಿರ್ಬಂಧಿಸಿತ್ತು. ಅವರ ಹಿರಿಯ ವಕೀಲರು ಸಹ ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮೌಖಿಕ ಭರವಸೆ ನೀಡಿದ್ದರು.

ಬೆಂಗಳೂರು ಕಾಲ್ತುಳಿತ ಹಿನ್ನಲೆ | ಬೃಹತ್ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ರೂಪಿಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...