Homeಮುಖಪುಟಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್...

ಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಲಕ್ನೋ: ಭಾರತೀಯ ಸೇನೆಯ ಕುರಿತು ಹೇಳಿಕೆಗಳಿಗಾಗಿ ತಮ್ಮ ವಿರುದ್ಧದ ಸಮನ್ಸ್ ರದ್ದುಗೊಳಿಸುವಂತೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ವಾಕ್ ಸ್ವಾತಂತ್ರ್ಯದ ಹಕ್ಕು ಸಶಸ್ತ್ರ ಪಡೆಗಳ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡುವುದಕ್ಕೆ ವಿಸ್ತರಿಸುವುದಿಲ್ಲ ಎಂದು ಅದು ಹೇಳಿದೆ.

ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದೆ. ಮಾನನಷ್ಟ ಪ್ರಕರಣ ಮತ್ತು ಫೆಬ್ರವರಿ 2025ರಲ್ಲಿ ಲಕ್ನೋದ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ನಿಸ್ಸಂದೇಹವಾಗಿ, ಭಾರತದ ಸಂವಿಧಾನದ ವಿಧಿ 19(1)(ಎ) ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. [ಆದರೆ] ಈ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಮತ್ತು ಯಾವುದೇ ವ್ಯಕ್ತಿಗೆ ಮಾನನಷ್ಟಕರ ಅಥವಾ ಭಾರತೀಯ ಸೇನೆಗೆ ಮಾನನಷ್ಟಕರವಾದ ಹೇಳಿಕೆಗಳನ್ನು ನೀಡುವ ಸ್ವಾತಂತ್ರ್ಯವನ್ನು ಇದು ಒಳಗೊಂಡಿಲ್ಲ” ಎಂದು ಹೇಳಿದರು.

ಗಡಿ ರಸ್ತೆಗಳ ಸಂಘಟನೆಯ (BRO) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರು ಸಲ್ಲಿಸಿರುವ ಮತ್ತು ಪ್ರಸ್ತುತ ಲಕ್ನೋದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರು 2022ರ ಡಿಸೆಂಬರ್ 16ರಂದು ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಗಳು ಎಂದು ಹೇಳಲಾಗಿದೆ.

2022ರ ಡಿಸೆಂಬರ್ 9ರಂದು ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಗಾಂಧಿಯವರ ಆಕ್ಷೇಪಾರ್ಹ ಹೇಳಿಕೆಗಳು ಭಾರತೀಯ ಸೇನೆಯ ಮಾನಹಾನಿಯನ್ನುಂಟುಮಾಡಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆ ಸಮಯದಲ್ಲಿ ಗಾಂಧಿಯವರು, “ಕೆಲವು ಜನರು ಭಾರತ್ ಜೋಡೋ ಯಾತ್ರೆ ಕುರಿತು ಪ್ರಶ್ನಿಸುತ್ತಾರೆ. ಆದರೆ ಚೀನಾ ಭಾರತದ 2,000 ಚದರ ಕಿ.ಮೀ. ಪ್ರದೇಶವನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿದ್ದರ ಕುರಿತು ಅವರು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ. ಹಾಗೆಯೇ ಭಾರತೀಯ ಮಾಧ್ಯಮಗಳು ಇದರ ಬಗ್ಗೆ ಕೇಳುವುದಿಲ್ಲ. ಇದು ನಿಜವಲ್ಲವೇ? ರಾಷ್ಟ್ರವು ಇದನ್ನೆಲ್ಲಾ ನೋಡುತ್ತಿದೆ. ಜನರಿಗೆ ತಿಳಿದಿಲ್ಲ ಎಂದು ನಟಿಸಬೇಡಿ…” ಎಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಹುಲ್ ಗಾಂಧಿ ಅವರು ಲಕ್ನೋ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇದು ಪ್ರಾಥಮಿಕವಾಗಿ ಅವರ ಹೇಳಿಕೆಗಳು ಭಾರತೀಯ ಸೇನೆ ಮತ್ತು ಅವರ ಕುಟುಂಬಗಳ ಸ್ಥೈರ್ಯ ಕುಗ್ಗಿಸುವಂತೆ ಕಂಡುಬಂದಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸೇನಾ ಅಧಿಕಾರಿಯನ್ನಾಗಲಿ ಅಥವಾ ವೈಯಕ್ತಿಕವಾಗಿ ಯಾರನ್ನು ಮಾನಹಾನಿಗೊಳಿಸಿಲ್ಲ ಎಂದು ರಾಹುಲ್ ವಾದಿಸಿದರೂ, ಹೈಕೋರ್ಟ್ ಇದನ್ನು ತಿರಸ್ಕರಿಸಿತು. ಸೆಕ್ಷನ್ 199(1) Cr.P.C. ಅಡಿಯಲ್ಲಿ ಪರೋಕ್ಷವಾಗಿ ಪ್ರಭಾವಿತರಾದವರನ್ನು ಸಹ “ಸಂತ್ರಸ್ತ ವ್ಯಕ್ತಿಗಳು” ಎಂದು ಪರಿಗಣಿಸಬಹುದು ಎಂದು ಉಲ್ಲೇಖಿಸಿತು.

ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಈ ಪ್ರಾಥಮಿಕ ಹಂತದಲ್ಲಿ ಸ್ಪರ್ಧಾತ್ಮಕ ಹಕ್ಕುಗಳನ್ನು ಮೌಲ್ಯಮಾಪನ ಮಾಡುವ ಅಗತ್ಯವಿಲ್ಲ ಎಂದು ಹೇಳಿತು.

ಎಲ್ಲಾ ಸಂಬಂಧಿತ ಸಂಗತಿಗಳನ್ನು ಪರಿಗಣಿಸಿ ಮತ್ತು ಪ್ರಾಥಮಿಕವಾಗು ಮೇಲ್ನೋಟಕ್ಕೆ ಪ್ರಕರಣ ಅಸ್ತಿತ್ವದಲ್ಲಿದೆ ಎಂಬ ಅಭಿಪ್ರಾಯವನ್ನು ರೂಪಿಸಿದ ನಂತರ “ವಿಚಾರಣಾ ನ್ಯಾಯಾಲಯವು ಸೆಕ್ಷನ್ 500 ಐಪಿಸಿ ಅಡಿಯಲ್ಲಿ ಅಪರಾಧಕ್ಕಾಗಿ ವಿಚಾರಣೆಯನ್ನು ಎದುರಿಸಲು ಅರ್ಜಿದಾರರಿಗೆ ಸಮನ್ಸ್ ಹೊರಡಿಸುವ ನಿರ್ಧಾರಕ್ಕೆ ಸರಿಯಾಗಿ ಬಂದಿದೆ” ಎಂದು ಅಭಿಪ್ರಾಯಿಸಿ, ಗಾಂಧಿಯವರಿಗೆ ಸಮನ್ಸ್ ನೀಡುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಅದು ಎತ್ತಿಹಿಡಿದಿದೆ.

2025ರ ಫೆಬ್ರವರಿ 11ರಂದು ಆಕ್ಷೇಪಾರ್ಹ ಸಮನ್ಸ್ ಆದೇಶವು … ಹಸ್ತಕ್ಷೇಪಕ್ಕೆ ಕಾರಣವಾಗುವ ಯಾವುದೇ ಕಾನೂನುಬಾಹಿರತೆಯಿಂದ ಕೂಡಿಲ್ಲ ಮತ್ತು ಸೆಕ್ಷನ್ 482 ಸಿಆರ್.ಪಿ.ಸಿ. ಅಡಿಯಲ್ಲಿ ಅರ್ಜಿಯು ಅರ್ಹತೆಯನ್ನು ಹೊಂದಿಲ್ಲ ಮತ್ತು ಅದನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿ ಅರ್ಜಿಯನ್ನು ವಜಾಗೊಳಿಸಿತು.

ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ, ಅವರು ಇನ್ನು ಮುಂದೆ ಯಾವುದೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದಂತೆ ಸ್ಪಷ್ಟವಾಗಿ ನಿರ್ಬಂಧಿಸಿತ್ತು. ಅವರ ಹಿರಿಯ ವಕೀಲರು ಸಹ ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮೌಖಿಕ ಭರವಸೆ ನೀಡಿದ್ದರು.

ಬೆಂಗಳೂರು ಕಾಲ್ತುಳಿತ ಹಿನ್ನಲೆ | ಬೃಹತ್ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ರೂಪಿಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...