Homeಮುಖಪುಟಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ.

ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡ ವಿಭಾಗೀಯ ಪೀಠವು, ಇದು ಕತ್ತು ಹಿಸುಕಿದ ಪರಿಣಾಮ ಸಂಭವಿಸಿದ ಕೊಲೆಯಾಗಿದೆಯೇ ಹೊರತು, ಆರೋಪಿಗಳು ಪ್ರತಿಪಾದಿಸಿದಂತೆ ಆತ್ಮಹತ್ಯೆಯ ಪ್ರಕರಣವಲ್ಲ ಎಂದು ತೀರ್ಪು ನೀಡಿದೆ.

ನ್ಯಾಯಾಲಯವು ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಗಮನಿಸಿದ್ದು, ಬಾಡಿಗೆದಾರ ಪ್ರದೀಪ್ ಕುಮಾರ್ ಮತ್ತು 15 ವರ್ಷದ ಬಾಲಕಿಯ ಹತ್ಯೆಯು ಆಕೆ ಗರ್ಭಿಣಿಯಾಗಿರುವ ವಿಷಯ ಪೋಷಕರಿಗೆ ತಿಳಿದ ತಕ್ಷಣವೇ ನಡೆದಿದೆ ಎಂದು ಅಭಿಪ್ರಾಯಪಟ್ಟಿದೆ.

ಆಗಸ್ಟ್ 20, 2014ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ, 28 ವರ್ಷದ ಶಿಕ್ಷಕ ಪ್ರದೀಪ್ ಕುಮಾರ್, ಅಪರಾಧಿಗಳಾದ ಮುಖೇಶ್ ಗುಪ್ತಾ ಮತ್ತು ಅವರ ಪತ್ನಿ ಸೀಮಾ ಗುಪ್ತಾ ಮನೆಯಲ್ಲಿ ಬಾಡಿಗೆದಾರರಾಗಿದ್ದರು.

ದಂಪತಿಯ 15 ವರ್ಷದ ಮಗಳು ಮತ್ತು ಪ್ರದೀಪ್ ಕುಮಾರ್ ನಡುವೆ ಇದ್ದ ದೈಹಿಕ ಸಂಬಂಧದಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಕಾರಣಕ್ಕೆ ದಂಪತಿ ಅವರಿಬ್ಬರನ್ನೂ ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಾಸಿಕ್ಯೂಷನ್ ಇದನ್ನು ಸ್ಪಷ್ಟವಾಗಿ ‘ಮರ್ಯಾದೆಗೇಡು ಹತ್ಯೆ’ ಪ್ರಕರಣ ಎಂದು ಹೇಳಿತ್ತು.

ಫೆಬ್ರವರಿ 2020ರಲ್ಲಿ ದಂಪತಿ ತಪ್ಪಿತಸ್ಥರೆಂದು ಸಾಬೀತಾಗಿ ವಿಚಾರಣಾ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ, ಆರೋಪಿಗಳ ಅವಿವಾಹಿತ ಮಗಳು ಗರ್ಭಿಣಿಯಾಗಿದ್ದಳು ಎಂಬ ಅಂಶವು ಸಾಬೀತಾಗಿದೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಅಲ್ಲದೆ, ಪ್ರದೀಪ್ ಕುಮಾರ್ ತಮ್ಮ ಮಗಳೊಂದಿಗೆ ಸಂಬಂಧ ಹೊಂದಿದ್ದ ಎಂಬ ಬಗ್ಗೆ ಗುಪ್ತಾ ದಂಪತಿಗೆ ಖಚಿತವಾಗಿ ತಿಳಿದಿತ್ತು ಎಂಬ ಅಂಶವನ್ನೂ ನ್ಯಾಯಾಲಯವು ಪತ್ತೆಹಚ್ಚಿದೆ.

ಈ ವಿಷಯವು (ಮಗಳ ಗರ್ಭಧಾರಣೆ) ಪೋಷಕರಿಗೆ ತೀವ್ರ ಆಘಾತವನ್ನುಂಟು ಮಾಡಿತ್ತು ಎಂದ ನ್ಯಾಯಾಲಯ, ದಂಪತಿಗೆ ದುಷ್ಕೃತ್ಯ ಎಸಗಲು ಸ್ಪಷ್ಟವಾದ ಉದ್ದೇಶವಿತ್ತು ಎಂದು ಹೇಳಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...