Homeಕರ್ನಾಟಕದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

- Advertisement -
- Advertisement -

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ”ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು” ಎಂದರು.

ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ:

”ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

”ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ಐಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ?” ಎಂದು ಕಿಡಿಕಾರಿದ್ದಾರೆ.

”ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ.. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಮಚ್ವು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು; ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.

”ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು”  ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ಏನಿದು ಪ್ರಕರಣ?

ಸಚಿವ ಡಿ ಸುಧಾಕರ್ ವಿರುದ್ಧ ಯಲಹಂಕದಲ್ಲಿ ವಿವಾದಿತ ಆಸ್ತಿಯಿಂದ ಕುಟುಂಬವನ್ನು ಅತಿಕ್ರಮ ಪ್ರವೇಶ ಮಾಡಿ ಬಲವಂತವಾಗಿ ಹೊರಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಸಚಿವರು ಮತ್ತು ಇತರರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಅವರನ್ನು ಆರೋಪಿ ಸಂಖ್ಯೆ 1 ಮತ್ತು ಸಚಿವ ಸುಧಾಕರ್ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಲಾಗಿದೆ. ಶ್ರೀನಿವಾಸ್ ಮತ್ತು ಭಾಗ್ಯಮ್ಮ ಅವರನ್ನು 3 ಮತ್ತು 4 ಆರೋಪಿಗಳಾಗಿ ಹೆಸರಿಸಲಾಗಿದೆ. ಸುಧಾಕರ್ ಸೆವೆನ್ ಹಿಲ್ಸ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ತನ್ನ ಮತ್ತು ಸೆವೆನ್ ಹಿಲ್ಸ್ ಡೆವಲಪರ್ಸ್ ನಡುವೆ ನ್ಯಾಯಾಲಯದಲ್ಲಿ ಯಲಹಂಕದ ಸರ್ವೆ ನಂಬರ್ 108/1ಕ್ಕೆ ಸಂಬಂಧಿಸಿದ ಆಸ್ತಿ ವಿವಾದ ಬಾಕಿ ಇದೆ ಎಂದು ಸುಬಮ್ಮ ಎಂಬ ದೂರುದಾರರು ಆರೋಪಿಸಿದ್ದಾರೆ.

ಶನಿವಾರದಂದು ಸುಧಾಕರ್ ಇತರ 35 ಮಂದಿ ಜೆಸಿಬಿಯೊಂದಿಗೆ ಬಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶೀಟ್ ಶೆಡ್ ಮತ್ತು ಮನೆಯ ಕಾಂಪೌಂಡ್ ಅನ್ನು ಧ್ವಂಸಗೊಳಿಸಿದ್ದಾರೆ. ಕುಟುಂಬದವರು ಮರಳಿ ಬಂದು ಸಚಿವರನ್ನು ವಿಚಾರಿಸಿದಾಗ ಜಾತಿ ನಿಂದನೆ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಸಚಿವ ಸುಧಾಕರ್ ತನ್ನ ಮಗಳು ಆಶಾ ಮೇಲೆ ಹಲ್ಲೆ ನಡೆಸಿದ್ದಾರೆ. ಅತಿಕ್ರಮಣದಾರರನ್ನು ತೆರವುಗೊಳಿಸುವಂತೆ ಸುಬಮ್ಮ ಪೊಲೀಸರಿಗೆ ಸೂಚಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಮಂಗಳವಾರ, ವಿವಾದಿತ ಸ್ಥಳದಲ್ಲಿ ಸಚಿವರು ಎಂದು ಹೇಳಲಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಆರೋಪವನ್ನು ನಿರಾಕರಿಸಿದ ಸಚಿವರು, ತಾವು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಹೇಳಿದ್ದಾರೆ. “ನಾನು ಹಲವಾರು ವರ್ಷಗಳಿಂದ ಅವರನ್ನು ಭೇಟಿ ಮಾಡಿಲ್ಲ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಜಮೀನು ಕಂಪನಿಗೆ ಸೇರಿದ್ದು, ಹಣವನ್ನು ಅವರ ಖಾತೆಗೆ ವರ್ಗಾಯಿಸಲಾಗಿದೆ ಮತ್ತು ಅದರ ಪುರಾವೆ ನಮ್ಮ ಬಳಿ ಇದೆ ಎಂದು ಸಚಿವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...