Homeಮುಖಪುಟತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರು ಗುರುವಾರ ಅನಿರೀಕ್ಷಿತ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. “ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸಿದೆ” ಎಂಬ ಆರೋಪವನ್ನು ಮಾಡಿರುವ ಅವರು, “ವೀಡಿಯೊಗಳ ಸರಣಿಯನ್ನು” ಪ್ರದರ್ಶಿಸಿದ್ದಾರೆ.

ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರನ್ನು ಖರೀದಿಸುವ ಪ್ರಯತ್ನ ವಿಫಲಗೊಳಿಸಲಾಗಿದೆ ಎಂದಿರುವ ಕೆಸಿಆರ್, “ಬಿಜೆಪಿಗೆ ಸಂಬಂಧಿಸಿದ ಒಂದು ಗಂಟೆಗೂ ಹೆಚ್ಚಿನ ಹಿಡನ್ ಕ್ಯಾಮೆರಾ ಫೂಟೇಜ್ ತನ್ನ ಬಳಿ ಇದೆ” ಎಂದು ಮಾಹಿತಿ ನೀಡಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಐದು ನಿಮಿಷಗಳ ಕಾಲ ವಿಡಿಯೊ ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಲಂಗಾಣದ ಫಾರ್ಮ್‌ಹೌಸ್‌ನಲ್ಲಿ ಕಳೆದ ವಾರ ನಡೆದ ಘಟನೆಯು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಗುರುವಾರ ನಡೆದ ಪ್ರಮುಖ ಉಪಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ದಲ್ಲಾಳಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘20 ಬಾರಿ’, ಪಿಎಂ ಮೋದಿಯನ್ನು ‘ಮೂರು ಬಾರಿ’ ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲಾದ ಸರ್ಕಾರ ಬದಲಾವಣೆಯ ಕುರಿತು ಅಲ್ಲಿ ಉಲ್ಲೇಖಿಸಲಾಗಿದ್ದು ಫಾರ್ಮ್‌ಹೌಸ್‌ನಲ್ಲಿ ನಡೆದ ಸಭೆಯು ಆಪರೇಷನ್‌ ಕಮಲದ ಕಾರ್ಯಾಚರಣೆಗೆ ಸಂಬಂಧಿಸಿದೆ ಎಂಬುದಕ್ಕೆ ವೀಡಿಯೊಗಳು ಸಾಕ್ಷಿಯಾಗಿದೆ ಎಂದು ಕೆಸಿಆರ್ ವಿವರಿಸಿದ್ದಾರೆ.

“ದೇಶವನ್ನು ಉಳಿಸಿ” ಎಂದು ನ್ಯಾಯಾಂಗವನ್ನು ವಿನಂತಿಸಿದ ಕೆಸಿಆರ್, ತಾನು ವೀಡಿಯೊಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಮತ್ತು ವಿರೋಧ ಪಕ್ಷದ ನಾಯಕರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲಿ ಸರ್ಕಾರಗಳನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಾಸಕರ ಖರೀದಿಸಲು ಯತ್ನಿಸಲಾಗಿದೆ ಎಂಬ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. “ಕೆಸಿಆರ್‌ ಪ್ರದರ್ಶಿಸಿರುವ ವಿಡಿಯೊಗಳು ಬಾಡಿಗೆ ನಟರನ್ನು ಕರೆಸಿ ಮಾಡಲಾದ ವಿಡಿಯೋ ರೆಕಾರ್ಡಿಂಗ್” ಎಂದು ಪ್ರತಿಕ್ರಿಯಿಸಿದೆ.

ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿಯವರು ತೆಲಂಗಾಣ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಫಾರ್ಮ್ ಹೌಸ್ ಕುಟುಂಬದಲ್ಲಿ ಉಂಟಾಗಿರುವ ಆತಂಕದ ಮಟ್ಟವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

“ಕೆಲವು ದೆಹಲಿ ದಲ್ಲಾಳಿಗಳು ತೆಲಂಗಾಣದ ಸ್ವಾಭಿಮಾನಕ್ಕೆ ಸವಾಲು ಹಾಕಲು ಬಂದರು. ಅವರು ನಾಲ್ಕು ಶಾಸಕರಿಗೆ ₹ 100 ಕೋಟಿ ನೀಡಿದರು” ಎಂದು ರಾವ್ ಎರಡು ದಿನಗಳ ಹಿಂದೆ ರ್ಯಾಲಿಯಲ್ಲಿ ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಉದ್ಯಮಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮ್ಯತ್ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ.

ಬುಧವಾರ ತೆಲಂಗಾಣ ರಾಷ್ಟ್ರ ಸಮಿತಿ ಶಾಸಕ ಪೈಲಟ್ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದು, “ಬಿಜೆಪಿಯವರಾದ ರಾಮಚಂದ್ರ ಭಾರತಿ ಮತ್ತು ನಂದಕುಮಾರ್ ನಮ್ಮನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರಲು ₹ 100 ಕೋಟಿ ಆಮಿಷ ಒಡ್ಡಿದ್ದರು” ಎಂದು ಆರೋಪಿಸಿದ್ದಾರೆ.

ತಪ್ಪಿದಲ್ಲಿ ಕೇಂದ್ರೀಯ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳ ಮೂಲಕ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಇತ್ತೀಚೆಗೆ ಮಾತನಾಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಬೇಕು” ಎಂದು ಒತ್ತಾಯಿಸಿದ್ದರು.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿತ್ತು ಎಂದಿದ್ದ ಅವರು, “ಬಿಜೆಪಿ ಆಡುತ್ತಿರುವ ಕೆಟ್ಟ ಆಟವು (dirty game) ತೆಲಂಗಾಣದಲ್ಲಿ ಈ ಬಾರಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ” ಎಂದು ಕುಟುಕಿದ್ದರು.

ಆಡಿಯೊವನ್ನು ಉಲ್ಲೇಖಿಸಿದ್ದ ಸಿಸೋಡಿಯಾ, “‘ಶಾಹ್ ಜಿ’ ಎಂಬವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದರೆ, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಏಕೆಂದರೆ ಒಬ್ಬ ದಲ್ಲಾಳಿ, ಶಾಸಕನನ್ನು ಖರೀದಿಸಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿಬಂದರೆ ಅದು ಇಡೀ ದೇಶಕ್ಕೆ ಅಪಾಯಕಾರಿ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...