Homeಮುಖಪುಟತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರು ಗುರುವಾರ ಅನಿರೀಕ್ಷಿತ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. “ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸಿದೆ” ಎಂಬ ಆರೋಪವನ್ನು ಮಾಡಿರುವ ಅವರು, “ವೀಡಿಯೊಗಳ ಸರಣಿಯನ್ನು” ಪ್ರದರ್ಶಿಸಿದ್ದಾರೆ.

ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರನ್ನು ಖರೀದಿಸುವ ಪ್ರಯತ್ನ ವಿಫಲಗೊಳಿಸಲಾಗಿದೆ ಎಂದಿರುವ ಕೆಸಿಆರ್, “ಬಿಜೆಪಿಗೆ ಸಂಬಂಧಿಸಿದ ಒಂದು ಗಂಟೆಗೂ ಹೆಚ್ಚಿನ ಹಿಡನ್ ಕ್ಯಾಮೆರಾ ಫೂಟೇಜ್ ತನ್ನ ಬಳಿ ಇದೆ” ಎಂದು ಮಾಹಿತಿ ನೀಡಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಐದು ನಿಮಿಷಗಳ ಕಾಲ ವಿಡಿಯೊ ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಲಂಗಾಣದ ಫಾರ್ಮ್‌ಹೌಸ್‌ನಲ್ಲಿ ಕಳೆದ ವಾರ ನಡೆದ ಘಟನೆಯು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಗುರುವಾರ ನಡೆದ ಪ್ರಮುಖ ಉಪಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ದಲ್ಲಾಳಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘20 ಬಾರಿ’, ಪಿಎಂ ಮೋದಿಯನ್ನು ‘ಮೂರು ಬಾರಿ’ ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲಾದ ಸರ್ಕಾರ ಬದಲಾವಣೆಯ ಕುರಿತು ಅಲ್ಲಿ ಉಲ್ಲೇಖಿಸಲಾಗಿದ್ದು ಫಾರ್ಮ್‌ಹೌಸ್‌ನಲ್ಲಿ ನಡೆದ ಸಭೆಯು ಆಪರೇಷನ್‌ ಕಮಲದ ಕಾರ್ಯಾಚರಣೆಗೆ ಸಂಬಂಧಿಸಿದೆ ಎಂಬುದಕ್ಕೆ ವೀಡಿಯೊಗಳು ಸಾಕ್ಷಿಯಾಗಿದೆ ಎಂದು ಕೆಸಿಆರ್ ವಿವರಿಸಿದ್ದಾರೆ.

“ದೇಶವನ್ನು ಉಳಿಸಿ” ಎಂದು ನ್ಯಾಯಾಂಗವನ್ನು ವಿನಂತಿಸಿದ ಕೆಸಿಆರ್, ತಾನು ವೀಡಿಯೊಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಮತ್ತು ವಿರೋಧ ಪಕ್ಷದ ನಾಯಕರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲಿ ಸರ್ಕಾರಗಳನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಾಸಕರ ಖರೀದಿಸಲು ಯತ್ನಿಸಲಾಗಿದೆ ಎಂಬ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. “ಕೆಸಿಆರ್‌ ಪ್ರದರ್ಶಿಸಿರುವ ವಿಡಿಯೊಗಳು ಬಾಡಿಗೆ ನಟರನ್ನು ಕರೆಸಿ ಮಾಡಲಾದ ವಿಡಿಯೋ ರೆಕಾರ್ಡಿಂಗ್” ಎಂದು ಪ್ರತಿಕ್ರಿಯಿಸಿದೆ.

ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿಯವರು ತೆಲಂಗಾಣ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಫಾರ್ಮ್ ಹೌಸ್ ಕುಟುಂಬದಲ್ಲಿ ಉಂಟಾಗಿರುವ ಆತಂಕದ ಮಟ್ಟವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

“ಕೆಲವು ದೆಹಲಿ ದಲ್ಲಾಳಿಗಳು ತೆಲಂಗಾಣದ ಸ್ವಾಭಿಮಾನಕ್ಕೆ ಸವಾಲು ಹಾಕಲು ಬಂದರು. ಅವರು ನಾಲ್ಕು ಶಾಸಕರಿಗೆ ₹ 100 ಕೋಟಿ ನೀಡಿದರು” ಎಂದು ರಾವ್ ಎರಡು ದಿನಗಳ ಹಿಂದೆ ರ್ಯಾಲಿಯಲ್ಲಿ ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಉದ್ಯಮಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮ್ಯತ್ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ.

ಬುಧವಾರ ತೆಲಂಗಾಣ ರಾಷ್ಟ್ರ ಸಮಿತಿ ಶಾಸಕ ಪೈಲಟ್ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದು, “ಬಿಜೆಪಿಯವರಾದ ರಾಮಚಂದ್ರ ಭಾರತಿ ಮತ್ತು ನಂದಕುಮಾರ್ ನಮ್ಮನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರಲು ₹ 100 ಕೋಟಿ ಆಮಿಷ ಒಡ್ಡಿದ್ದರು” ಎಂದು ಆರೋಪಿಸಿದ್ದಾರೆ.

ತಪ್ಪಿದಲ್ಲಿ ಕೇಂದ್ರೀಯ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳ ಮೂಲಕ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಇತ್ತೀಚೆಗೆ ಮಾತನಾಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಬೇಕು” ಎಂದು ಒತ್ತಾಯಿಸಿದ್ದರು.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿತ್ತು ಎಂದಿದ್ದ ಅವರು, “ಬಿಜೆಪಿ ಆಡುತ್ತಿರುವ ಕೆಟ್ಟ ಆಟವು (dirty game) ತೆಲಂಗಾಣದಲ್ಲಿ ಈ ಬಾರಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ” ಎಂದು ಕುಟುಕಿದ್ದರು.

ಆಡಿಯೊವನ್ನು ಉಲ್ಲೇಖಿಸಿದ್ದ ಸಿಸೋಡಿಯಾ, “‘ಶಾಹ್ ಜಿ’ ಎಂಬವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದರೆ, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಏಕೆಂದರೆ ಒಬ್ಬ ದಲ್ಲಾಳಿ, ಶಾಸಕನನ್ನು ಖರೀದಿಸಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿಬಂದರೆ ಅದು ಇಡೀ ದೇಶಕ್ಕೆ ಅಪಾಯಕಾರಿ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...