Homeಕರ್ನಾಟಕಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

ಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ” ಎಂದ ಕಾಂಗ್ರೆಸ್ ಕುಟುಕಿದೆ.

- Advertisement -
- Advertisement -

ದೀಪಾವಳಿ ಹಬ್ಬದ ನೆಪದಲ್ಲಿ, ಮುಂದಿನ ಚುನಾವಣೆಯ ಪರಿಣಾಮಗಳನ್ನು ಊಹಿಸಿ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಪತ್ರಕರ್ತರಿಗೆ ಎರಡೂವರೆ ಲಕ್ಷ ರೂ.ಗಳಷ್ಟು ಲಂಚವನ್ನು ನೀಡಿರುವ ಎಂಬ ಆರೋಪ ಬಂದಿದ್ದು, ಈ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಥೂ …..ಇದು ನಿಜವೇ ಆಗಿದ್ದರೆ ಇದೆಂಥ ಮೂರು ಬಿಟ್ಟ ಸರಕಾರ…..ಸುಳ್ಳು ವಂಚನೆ ಮೋಸ ಮಾಡಿ ಯಾರಿಗೋಸ್ಕರ ಆಳ್ವಿಕೆ ಮಾಡುವುದು ಅಂತ ಜನರು ಇದನ್ನು ಬಹಳ ಗಂಭೀರವಾಗಿ ಗಮನಿಸಬೇಕು ದಲಿತರಿಗೆ ರಿಸರ್ವೇಶನ್ ಕೊಡುತ್ತೇನೆ ಅಂತ ಸುಮ್ಮನೆ ಏರಿಸಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೂ ಅವಕಾಶ ಕೊಡದೆ ವಿದ್ಯಾರ್ಥಿ ವೇತನವು ಕೊಡದೆ ಮೊಳಕೆಯಲ್ಲಿ ವಿದ್ಯಾರ್ಥಿ ಜೀವನವನ್ನೇ ಮುಳುಗಿಸಿ ಬಿಟ್ಟು ಅವರ ಭವಿಷ್ಯವನ್ನೇ ಹಾಳು- ಮಾಡುವ ಇದೆಂಥ ಸರಕಾರ ಕಾಣ್ತಿವಿ ಸ್ವಾಮಿ……

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...