Homeಕರ್ನಾಟಕಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

ಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ” ಎಂದ ಕಾಂಗ್ರೆಸ್ ಕುಟುಕಿದೆ.

- Advertisement -
- Advertisement -

ದೀಪಾವಳಿ ಹಬ್ಬದ ನೆಪದಲ್ಲಿ, ಮುಂದಿನ ಚುನಾವಣೆಯ ಪರಿಣಾಮಗಳನ್ನು ಊಹಿಸಿ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಪತ್ರಕರ್ತರಿಗೆ ಎರಡೂವರೆ ಲಕ್ಷ ರೂ.ಗಳಷ್ಟು ಲಂಚವನ್ನು ನೀಡಿರುವ ಎಂಬ ಆರೋಪ ಬಂದಿದ್ದು, ಈ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಥೂ …..ಇದು ನಿಜವೇ ಆಗಿದ್ದರೆ ಇದೆಂಥ ಮೂರು ಬಿಟ್ಟ ಸರಕಾರ…..ಸುಳ್ಳು ವಂಚನೆ ಮೋಸ ಮಾಡಿ ಯಾರಿಗೋಸ್ಕರ ಆಳ್ವಿಕೆ ಮಾಡುವುದು ಅಂತ ಜನರು ಇದನ್ನು ಬಹಳ ಗಂಭೀರವಾಗಿ ಗಮನಿಸಬೇಕು ದಲಿತರಿಗೆ ರಿಸರ್ವೇಶನ್ ಕೊಡುತ್ತೇನೆ ಅಂತ ಸುಮ್ಮನೆ ಏರಿಸಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೂ ಅವಕಾಶ ಕೊಡದೆ ವಿದ್ಯಾರ್ಥಿ ವೇತನವು ಕೊಡದೆ ಮೊಳಕೆಯಲ್ಲಿ ವಿದ್ಯಾರ್ಥಿ ಜೀವನವನ್ನೇ ಮುಳುಗಿಸಿ ಬಿಟ್ಟು ಅವರ ಭವಿಷ್ಯವನ್ನೇ ಹಾಳು- ಮಾಡುವ ಇದೆಂಥ ಸರಕಾರ ಕಾಣ್ತಿವಿ ಸ್ವಾಮಿ……

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...