Homeಕರ್ನಾಟಕಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

ಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ” ಎಂದ ಕಾಂಗ್ರೆಸ್ ಕುಟುಕಿದೆ.

- Advertisement -
- Advertisement -

ದೀಪಾವಳಿ ಹಬ್ಬದ ನೆಪದಲ್ಲಿ, ಮುಂದಿನ ಚುನಾವಣೆಯ ಪರಿಣಾಮಗಳನ್ನು ಊಹಿಸಿ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಪತ್ರಕರ್ತರಿಗೆ ಎರಡೂವರೆ ಲಕ್ಷ ರೂ.ಗಳಷ್ಟು ಲಂಚವನ್ನು ನೀಡಿರುವ ಎಂಬ ಆರೋಪ ಬಂದಿದ್ದು, ಈ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಥೂ …..ಇದು ನಿಜವೇ ಆಗಿದ್ದರೆ ಇದೆಂಥ ಮೂರು ಬಿಟ್ಟ ಸರಕಾರ…..ಸುಳ್ಳು ವಂಚನೆ ಮೋಸ ಮಾಡಿ ಯಾರಿಗೋಸ್ಕರ ಆಳ್ವಿಕೆ ಮಾಡುವುದು ಅಂತ ಜನರು ಇದನ್ನು ಬಹಳ ಗಂಭೀರವಾಗಿ ಗಮನಿಸಬೇಕು ದಲಿತರಿಗೆ ರಿಸರ್ವೇಶನ್ ಕೊಡುತ್ತೇನೆ ಅಂತ ಸುಮ್ಮನೆ ಏರಿಸಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೂ ಅವಕಾಶ ಕೊಡದೆ ವಿದ್ಯಾರ್ಥಿ ವೇತನವು ಕೊಡದೆ ಮೊಳಕೆಯಲ್ಲಿ ವಿದ್ಯಾರ್ಥಿ ಜೀವನವನ್ನೇ ಮುಳುಗಿಸಿ ಬಿಟ್ಟು ಅವರ ಭವಿಷ್ಯವನ್ನೇ ಹಾಳು- ಮಾಡುವ ಇದೆಂಥ ಸರಕಾರ ಕಾಣ್ತಿವಿ ಸ್ವಾಮಿ……

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...