Homeಕರ್ನಾಟಕತನ್ವೀರ್ ಹಾಶ್ಮಿ ಕುಟುಂಬದ ಜೊತೆ ಉದ್ಯಮ ಪಾಲುದಾರಿಕೆ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಯತ್ನಾಳ್

ತನ್ವೀರ್ ಹಾಶ್ಮಿ ಕುಟುಂಬದ ಜೊತೆ ಉದ್ಯಮ ಪಾಲುದಾರಿಕೆ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಯತ್ನಾಳ್

- Advertisement -
- Advertisement -

ಸುನ್ನೀ ಧಾರ್ಮಿಕ ಮುಖಂಡ ಸೈಯದ್ ತನ್ವೀರ್ ಹಾಶ್ಮಿ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಆರೋಪ ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ತಲುಪಿದೆ.

ನಿನ್ನೆ (ಡಿ.7) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೆಪಿಸಿಸಿ ವಕ್ತಾರ ಎಸ್.ಎಂ ಪಾಟೀಲ ಗಣಿಹಾರ ನಗರದ ಗಾಂಧಿ ಚೌಕ ಬಳಿ ಇರುವ ಟೂರಿಸ್ಟ್‌ ಹೋಟೆಲ್‌ನಲ್ಲಿ ಶಾಸಕ ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಪಾಲುದಾರರು. ಅಲ್ಲದೆ, ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು ಒಟ್ಟಿಗೆ ಇವೆ ಎಂದಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ ಮುಲ್ಲಾ ಮಾತನಾಡಿ, ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ನಡುವೆ ಒಳ್ಳೆಯ ಒಡನಾಟವಿತ್ತು. ಚುನಾವಣೆಯ ಸಂದರ್ಭದಲ್ಲಿ ಅವರಿಬ್ಬರನ್ನು ನನ್ನ ಮನೆಯಲ್ಲೇ ಭೇಟಿ ಮಾಡಿಸಿದ್ದೆ. ಒಟ್ಟಿಗೆ ಊಟ ಮಾಡಿದ್ದಾರೆ ಎಂದು ಹೇಳಿದ್ದರು.

ಈ ಕುರಿತ ಮಾಧ್ಯಮ ವರದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಹಲವರು, ತನ್ವೀರ್ ಹಾಶ್ಮಿಗೆ ಐಸಿಸ್ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕನಿಗೆ ಅವರ ಜೊತೆಯೇ ವ್ಯವಹಾರ ಸಂಬಂಧವಿದೆ ಎಂದಿದ್ದರು.

ಇದಕ್ಕೆ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಶಾಸಕ ಯತ್ನಾಳ್, “ನೀವು ನಿಮ್ಮ ಮನೆ ಕೆಲಸವನ್ನು ಸರಿಯಾಗಿ ಮಾಡದಿದ್ದಾಗ ಇದು ಸಂಭವಿಸುತ್ತದೆ. ನನ್ನೊಂದಿಗೆ ಪಾಲುದಾರರಾಗಿರುವ ವ್ಯಕ್ತಿಯನ್ನು ಕರೆತರಲು ನಾನು ನಿಮಗೆ ಸವಾಲು ಹಾಕುತ್ತೇನೆ. ನನ್ನ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಮಾನನಷ್ಟ ಮೊಕದ್ದಮೆ ಹೂಡಲು ನನ್ನ ವಕೀಲರಿಗೆ ಸೂಚಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ತನ್ವೀರ್ ಹಾಶ್ಮಿಗೆ ಐಸಿಸ್ ಜೊತೆ ನಂಟಿದೆ ಎಂದು ಆರೋಪಿದ ಯತ್ನಾಳ್

ವಿಜಯಪುರವನ್ನು ಕೇಂದ್ರವಾಗಿ ಕಾರ್ಯಚರಿಸುತ್ತಿರುವ ಕರ್ನಾಟಕದ ಸುನ್ನೀ ಮುಸ್ಲಿಮರ ಆಧ್ಯಾತ್ಮಿಕ ನಾಯಕ ತನ್ವೀರ್ ಹಾಶ್ಮಿಯವರಿಗೆ ಐಸಿಸ್ ಜೊತೆ ನಂಟಿದೆ. ಅವರ ಜೊತೆ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮ ಗುರುಗಳ ಸಭೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ತನ್ವೀರ್ ಹಾಶ್ಮಿ, “ನನಗೆ ಭಯೋತ್ಪಾದಕರ ಜೊತೆ ನಂಟಿದೆ ಎಂಬುವುದು ಖಾತ್ರಿಯಾದರೆ ದೇಶ ತೊರೆಯುತ್ತೇನೆ. ನೀವು ಮಾಡಿರುವ ಆರೋಪ ಸುಳ್ಳು ಎಂಬುವುದು ಖಚಿತವಾದರೆ ದೇಶ ತೊರೆಯಲು ಸಿದ್ದರಿದ್ದೀರಾ?” ಎಂದು ಸವಾಲ್ ಹಾಕಿದ್ದರು.

ತನ್ವೀರ್ ಹಾಶ್ಮಿ ಮೇಲಿನ ಯತ್ನಾಳ್ ಆರೋಪ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಮಾಧ್ಯಮಗಳ ಫ್ಯಾಕ್ಟ್ ಚೆಕ್ ಪ್ರಕಾರ, ಶಾಸಕ ಯತ್ನಾಳ್ ಆರೋಪ ಸುಳ್ಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ : CM ವಿರುದ್ದ BJP ಶಾಸಕ ಯತ್ನಾಳ್ ಮಾಡಿದ ಆರೋಪ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...