Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...