Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...