Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...