Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...