Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...