Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

ಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಲ್ಲಿ ನಡೆಯುತ್ತಿರುವ ವ್ಯವಸ್ಥಿತ ತಾರತಮ್ಯ ಮತ್ತು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯ ವಿರುದ್ದ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ (AIOBCSA) ಮತ್ತು ಡಾ. ಬಿಆರ್ ಅಂಬೇಡ್ಕರ್ ರಾಷ್ಟ್ರೀಯ ಇಂಜಿನಿಯರ್‌ಗಳ ಸಂಘ (BANAE) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 20ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಐಐಟಿ, ಐಐಎಂ ಸೇರಿದಂತೆ ಭಾರತದ ಉನ್ನತ ವಿದ್ಯಾಸಂಸ್ಥೆಗಳಲ್ಲಿ ವೈವಿದ್ಯತೆ ಮತ್ತು ಒಳಗೊಳ್ಳುವಿಕೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಪಡೆಯಲಾಗಿದೆ. ಆ ಮಾಹಿತಿಯ ಪ್ರಕಾರ, ಮೀಸಲಾತಿ, ರೋಸ್ಟರ್ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಜಾತಿ-ಆಧಾರಿತ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ವೈಯಕ್ತಿಕ ಕಿರುಕುಳದ ತೀವ್ರ ಪ್ರಕರಣಗಳು ವರದಿಯಾಗಿವೆ. ವಿಶೇಷವಾಗಿ ಬೆಂಗಳೂರಿನ ಐಐಎಂನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಕುರಿತು ಕಳವಳಕಾರಿ ಮಾಹಿತಿ ಹೊರಬಿದ್ದಿದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

“ತುಳಿತಕ್ಕೊಳಗಾದ ಸಮುದಾಯಗಳ ವಿರುದ್ಧ, ನಿರ್ದಿಷ್ಟವಾಗಿ ಪರಿಶಿಷ್ಟ ಜಾತಿಗಳು (ಎಸ್‌), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿರುದ್ದದ ತಾರತಮ್ಯವನ್ನು ಪರಿಹರಿಸಲು ವಿಫಲವಾದ ಆರೋಪ ಹೊತ್ತಿರುವ ಬೆಂಗಳೂರು ಐಐಎಂ ಆಡಳಿತ ಮಂಡಳಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಮತ್ತು ಡೀನ್ (ಅಧ್ಯಾಪಕ) ದಿನೇಶ್ ಕುಮಾರ್ ಸೇರಿದಂತೆ ಪ್ರಮುಖ ನಾಯಕತ್ವದ ವ್ಯಕ್ತಿಗಳನ್ನು ತಕ್ಷಣವೇ ಹುದ್ದೆಯಿಂದ ತೆಗೆದು ಹಾಕಬೇಕು ಎಂಬುವುದು ನಮ್ಮ ಪ್ರತಿಭಟನೆಯ ಪ್ರಾಧಮಿಕ ಬೇಡಿಕೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಮಾಹಿತಿ ನೀಡಿದೆ.

ಪ್ರತಿಭಟನೆಯ ಇತರ ಬೇಡಿಕೆಗಳು

  1. ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿದಂತೆ ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಕುಂದು ಕೊರತೆಗಳ ಆಲಿಸಲು ವಿಶೇಷ ಕೋಶವನ್ನು ಸ್ಥಾಪಿಸಬೇಕು.
  2. ಜಾತಿ ಆಧಾರಿತ ತಾರತಮ್ಯದ ವಿರುದ್ಧ ಮಾತನಾಡುವ ಅಧ್ಯಾಪಕರಿಗೆ ರಕ್ಷಣಾತ್ಮಕ ಕ್ರಮಗಳ ಅನುಷ್ಠಾನಗೊಳಿಸಬೇಕು
  3. ಪಾರದರ್ಶಕ ರೋಸ್ಟರ್ ನಿರ್ವಹಣೆಯೊಂದಿಗೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಅಧ್ಯಾಪಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು.
  4. ಹಿಂದುಳಿದ ಸಮುದಾಯಗಳ ಉತ್ತಮ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಐಐಎಂ (ತಿದ್ದುಪಡಿ) ಕಾಯ್ದೆ- 2023 ರ ಅಡಿಯಲ್ಲಿ ಐಐಎಂ ಬೆಂಗಳೂರಿನ ಆಡಳಿತ ಮಂಡಳಿಯನ್ನು ಪುನರ್ ರಚನೆ ಮಾಡಬೇಕು.

ದಮನಿತ ಸಮುದಾಯಗಳನ್ನು ವ್ಯವಸ್ಥಿತವಾಗಿ ಹೊರಗಿಡುವ ನಿಟ್ಟಿನಲ್ಲಿ ಐಐಎಂಬಿಯ ಪ್ರಸ್ತುತ ನಾಯಕತ್ವ ಸತತವಾಗಿ ಪ್ರಯತ್ನ ನಡೆಸುತ್ತಿದೆ. ಅಧ್ಯಾಪಕರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತುವವರಿಗೆ ನೀಡುತ್ತಿರುವ ಕಿರುಕುಳವನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ತಿಳಿಸಿದೆ.

ಪ್ರತಿಭಟನೆಗೆ ವಿವಿಧ ಅಂಬೇಡ್ಕರ್‌ವಾದ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದೆ. ಅನೇಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಲಿದೆ. ಬಲವಾದ ಸಾಂಸ್ಥಿಕ ಸುಧಾರಣೆಗಳನ್ನು ಸಾಧಿಸುವತ್ತ ನಮ್ಮ ಪ್ರತಿಭಟನೆ ಗಮನಹರಿಸುತ್ತದೆ ಎಂದು ಸಂಘಟಕರು ಹೇಳಿದ್ದಾರೆ.

ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಗೆ ಅಪಾಯದಲ್ಲಿರುವ ಸಂದರ್ಭದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆರ್‌ಟಿಐ ಮೂಲಕ ಪಡೆದಿರುವ ಮಾಹಿತಿಯಲ್ಲಿ ಬಹಿರಂಗವಾಗಿರುವ ಬೆಂಗಳೂರು ಐಐಎಂನ ತಾರತಮ್ಯ ನೀತಿ, ಇಡೀ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುವುದನ್ನು ಬಿಂಬಿಸುತ್ತದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

ಭಾರತೀಯ ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರಗತಿಪರರು ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಬೇಕು ಎಂದು ಪ್ರತಿಭಟನೆಯ ಸಂಘಟಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...