Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

ಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಲ್ಲಿ ನಡೆಯುತ್ತಿರುವ ವ್ಯವಸ್ಥಿತ ತಾರತಮ್ಯ ಮತ್ತು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯ ವಿರುದ್ದ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ (AIOBCSA) ಮತ್ತು ಡಾ. ಬಿಆರ್ ಅಂಬೇಡ್ಕರ್ ರಾಷ್ಟ್ರೀಯ ಇಂಜಿನಿಯರ್‌ಗಳ ಸಂಘ (BANAE) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 20ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಐಐಟಿ, ಐಐಎಂ ಸೇರಿದಂತೆ ಭಾರತದ ಉನ್ನತ ವಿದ್ಯಾಸಂಸ್ಥೆಗಳಲ್ಲಿ ವೈವಿದ್ಯತೆ ಮತ್ತು ಒಳಗೊಳ್ಳುವಿಕೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಪಡೆಯಲಾಗಿದೆ. ಆ ಮಾಹಿತಿಯ ಪ್ರಕಾರ, ಮೀಸಲಾತಿ, ರೋಸ್ಟರ್ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಜಾತಿ-ಆಧಾರಿತ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ವೈಯಕ್ತಿಕ ಕಿರುಕುಳದ ತೀವ್ರ ಪ್ರಕರಣಗಳು ವರದಿಯಾಗಿವೆ. ವಿಶೇಷವಾಗಿ ಬೆಂಗಳೂರಿನ ಐಐಎಂನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಕುರಿತು ಕಳವಳಕಾರಿ ಮಾಹಿತಿ ಹೊರಬಿದ್ದಿದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

“ತುಳಿತಕ್ಕೊಳಗಾದ ಸಮುದಾಯಗಳ ವಿರುದ್ಧ, ನಿರ್ದಿಷ್ಟವಾಗಿ ಪರಿಶಿಷ್ಟ ಜಾತಿಗಳು (ಎಸ್‌), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿರುದ್ದದ ತಾರತಮ್ಯವನ್ನು ಪರಿಹರಿಸಲು ವಿಫಲವಾದ ಆರೋಪ ಹೊತ್ತಿರುವ ಬೆಂಗಳೂರು ಐಐಎಂ ಆಡಳಿತ ಮಂಡಳಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಮತ್ತು ಡೀನ್ (ಅಧ್ಯಾಪಕ) ದಿನೇಶ್ ಕುಮಾರ್ ಸೇರಿದಂತೆ ಪ್ರಮುಖ ನಾಯಕತ್ವದ ವ್ಯಕ್ತಿಗಳನ್ನು ತಕ್ಷಣವೇ ಹುದ್ದೆಯಿಂದ ತೆಗೆದು ಹಾಕಬೇಕು ಎಂಬುವುದು ನಮ್ಮ ಪ್ರತಿಭಟನೆಯ ಪ್ರಾಧಮಿಕ ಬೇಡಿಕೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಮಾಹಿತಿ ನೀಡಿದೆ.

ಪ್ರತಿಭಟನೆಯ ಇತರ ಬೇಡಿಕೆಗಳು

  1. ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿದಂತೆ ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಕುಂದು ಕೊರತೆಗಳ ಆಲಿಸಲು ವಿಶೇಷ ಕೋಶವನ್ನು ಸ್ಥಾಪಿಸಬೇಕು.
  2. ಜಾತಿ ಆಧಾರಿತ ತಾರತಮ್ಯದ ವಿರುದ್ಧ ಮಾತನಾಡುವ ಅಧ್ಯಾಪಕರಿಗೆ ರಕ್ಷಣಾತ್ಮಕ ಕ್ರಮಗಳ ಅನುಷ್ಠಾನಗೊಳಿಸಬೇಕು
  3. ಪಾರದರ್ಶಕ ರೋಸ್ಟರ್ ನಿರ್ವಹಣೆಯೊಂದಿಗೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಅಧ್ಯಾಪಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು.
  4. ಹಿಂದುಳಿದ ಸಮುದಾಯಗಳ ಉತ್ತಮ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಐಐಎಂ (ತಿದ್ದುಪಡಿ) ಕಾಯ್ದೆ- 2023 ರ ಅಡಿಯಲ್ಲಿ ಐಐಎಂ ಬೆಂಗಳೂರಿನ ಆಡಳಿತ ಮಂಡಳಿಯನ್ನು ಪುನರ್ ರಚನೆ ಮಾಡಬೇಕು.

ದಮನಿತ ಸಮುದಾಯಗಳನ್ನು ವ್ಯವಸ್ಥಿತವಾಗಿ ಹೊರಗಿಡುವ ನಿಟ್ಟಿನಲ್ಲಿ ಐಐಎಂಬಿಯ ಪ್ರಸ್ತುತ ನಾಯಕತ್ವ ಸತತವಾಗಿ ಪ್ರಯತ್ನ ನಡೆಸುತ್ತಿದೆ. ಅಧ್ಯಾಪಕರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತುವವರಿಗೆ ನೀಡುತ್ತಿರುವ ಕಿರುಕುಳವನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ತಿಳಿಸಿದೆ.

ಪ್ರತಿಭಟನೆಗೆ ವಿವಿಧ ಅಂಬೇಡ್ಕರ್‌ವಾದ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದೆ. ಅನೇಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಲಿದೆ. ಬಲವಾದ ಸಾಂಸ್ಥಿಕ ಸುಧಾರಣೆಗಳನ್ನು ಸಾಧಿಸುವತ್ತ ನಮ್ಮ ಪ್ರತಿಭಟನೆ ಗಮನಹರಿಸುತ್ತದೆ ಎಂದು ಸಂಘಟಕರು ಹೇಳಿದ್ದಾರೆ.

ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಗೆ ಅಪಾಯದಲ್ಲಿರುವ ಸಂದರ್ಭದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆರ್‌ಟಿಐ ಮೂಲಕ ಪಡೆದಿರುವ ಮಾಹಿತಿಯಲ್ಲಿ ಬಹಿರಂಗವಾಗಿರುವ ಬೆಂಗಳೂರು ಐಐಎಂನ ತಾರತಮ್ಯ ನೀತಿ, ಇಡೀ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುವುದನ್ನು ಬಿಂಬಿಸುತ್ತದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

ಭಾರತೀಯ ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರಗತಿಪರರು ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಬೇಕು ಎಂದು ಪ್ರತಿಭಟನೆಯ ಸಂಘಟಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...