Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

ಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಲ್ಲಿ ನಡೆಯುತ್ತಿರುವ ವ್ಯವಸ್ಥಿತ ತಾರತಮ್ಯ ಮತ್ತು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯ ವಿರುದ್ದ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ (AIOBCSA) ಮತ್ತು ಡಾ. ಬಿಆರ್ ಅಂಬೇಡ್ಕರ್ ರಾಷ್ಟ್ರೀಯ ಇಂಜಿನಿಯರ್‌ಗಳ ಸಂಘ (BANAE) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 20ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಐಐಟಿ, ಐಐಎಂ ಸೇರಿದಂತೆ ಭಾರತದ ಉನ್ನತ ವಿದ್ಯಾಸಂಸ್ಥೆಗಳಲ್ಲಿ ವೈವಿದ್ಯತೆ ಮತ್ತು ಒಳಗೊಳ್ಳುವಿಕೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಪಡೆಯಲಾಗಿದೆ. ಆ ಮಾಹಿತಿಯ ಪ್ರಕಾರ, ಮೀಸಲಾತಿ, ರೋಸ್ಟರ್ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಜಾತಿ-ಆಧಾರಿತ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ವೈಯಕ್ತಿಕ ಕಿರುಕುಳದ ತೀವ್ರ ಪ್ರಕರಣಗಳು ವರದಿಯಾಗಿವೆ. ವಿಶೇಷವಾಗಿ ಬೆಂಗಳೂರಿನ ಐಐಎಂನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಕುರಿತು ಕಳವಳಕಾರಿ ಮಾಹಿತಿ ಹೊರಬಿದ್ದಿದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

“ತುಳಿತಕ್ಕೊಳಗಾದ ಸಮುದಾಯಗಳ ವಿರುದ್ಧ, ನಿರ್ದಿಷ್ಟವಾಗಿ ಪರಿಶಿಷ್ಟ ಜಾತಿಗಳು (ಎಸ್‌), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿರುದ್ದದ ತಾರತಮ್ಯವನ್ನು ಪರಿಹರಿಸಲು ವಿಫಲವಾದ ಆರೋಪ ಹೊತ್ತಿರುವ ಬೆಂಗಳೂರು ಐಐಎಂ ಆಡಳಿತ ಮಂಡಳಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಮತ್ತು ಡೀನ್ (ಅಧ್ಯಾಪಕ) ದಿನೇಶ್ ಕುಮಾರ್ ಸೇರಿದಂತೆ ಪ್ರಮುಖ ನಾಯಕತ್ವದ ವ್ಯಕ್ತಿಗಳನ್ನು ತಕ್ಷಣವೇ ಹುದ್ದೆಯಿಂದ ತೆಗೆದು ಹಾಕಬೇಕು ಎಂಬುವುದು ನಮ್ಮ ಪ್ರತಿಭಟನೆಯ ಪ್ರಾಧಮಿಕ ಬೇಡಿಕೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಮಾಹಿತಿ ನೀಡಿದೆ.

ಪ್ರತಿಭಟನೆಯ ಇತರ ಬೇಡಿಕೆಗಳು

  1. ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿದಂತೆ ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಕುಂದು ಕೊರತೆಗಳ ಆಲಿಸಲು ವಿಶೇಷ ಕೋಶವನ್ನು ಸ್ಥಾಪಿಸಬೇಕು.
  2. ಜಾತಿ ಆಧಾರಿತ ತಾರತಮ್ಯದ ವಿರುದ್ಧ ಮಾತನಾಡುವ ಅಧ್ಯಾಪಕರಿಗೆ ರಕ್ಷಣಾತ್ಮಕ ಕ್ರಮಗಳ ಅನುಷ್ಠಾನಗೊಳಿಸಬೇಕು
  3. ಪಾರದರ್ಶಕ ರೋಸ್ಟರ್ ನಿರ್ವಹಣೆಯೊಂದಿಗೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಅಧ್ಯಾಪಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು.
  4. ಹಿಂದುಳಿದ ಸಮುದಾಯಗಳ ಉತ್ತಮ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಐಐಎಂ (ತಿದ್ದುಪಡಿ) ಕಾಯ್ದೆ- 2023 ರ ಅಡಿಯಲ್ಲಿ ಐಐಎಂ ಬೆಂಗಳೂರಿನ ಆಡಳಿತ ಮಂಡಳಿಯನ್ನು ಪುನರ್ ರಚನೆ ಮಾಡಬೇಕು.

ದಮನಿತ ಸಮುದಾಯಗಳನ್ನು ವ್ಯವಸ್ಥಿತವಾಗಿ ಹೊರಗಿಡುವ ನಿಟ್ಟಿನಲ್ಲಿ ಐಐಎಂಬಿಯ ಪ್ರಸ್ತುತ ನಾಯಕತ್ವ ಸತತವಾಗಿ ಪ್ರಯತ್ನ ನಡೆಸುತ್ತಿದೆ. ಅಧ್ಯಾಪಕರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತುವವರಿಗೆ ನೀಡುತ್ತಿರುವ ಕಿರುಕುಳವನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ತಿಳಿಸಿದೆ.

ಪ್ರತಿಭಟನೆಗೆ ವಿವಿಧ ಅಂಬೇಡ್ಕರ್‌ವಾದ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದೆ. ಅನೇಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಲಿದೆ. ಬಲವಾದ ಸಾಂಸ್ಥಿಕ ಸುಧಾರಣೆಗಳನ್ನು ಸಾಧಿಸುವತ್ತ ನಮ್ಮ ಪ್ರತಿಭಟನೆ ಗಮನಹರಿಸುತ್ತದೆ ಎಂದು ಸಂಘಟಕರು ಹೇಳಿದ್ದಾರೆ.

ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಗೆ ಅಪಾಯದಲ್ಲಿರುವ ಸಂದರ್ಭದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆರ್‌ಟಿಐ ಮೂಲಕ ಪಡೆದಿರುವ ಮಾಹಿತಿಯಲ್ಲಿ ಬಹಿರಂಗವಾಗಿರುವ ಬೆಂಗಳೂರು ಐಐಎಂನ ತಾರತಮ್ಯ ನೀತಿ, ಇಡೀ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುವುದನ್ನು ಬಿಂಬಿಸುತ್ತದೆ ಎಂದು ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಹೇಳಿದೆ.

ಭಾರತೀಯ ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರಗತಿಪರರು ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಬೇಕು ಎಂದು ಪ್ರತಿಭಟನೆಯ ಸಂಘಟಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...