Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...