Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...